Don't Miss!
- News UPSC Result: 671ನೇ ರ್ಯಾಂಕ್ ಪಡೆದ ಚಾಮರಾಜನಗರ ಯುವಕ
- Sports KKR vs RR IPL 2024: ಸುನಿಲ್ ನರೈನ್ ಚೊಚ್ಚಲ ಐಪಿಎಲ್ ಶತಕ; ರಾಜಸ್ಥಾನ್ಗೆ ಬೃಹತ್ ಗುರಿ ನೀಡಿದ ಕೋಲ್ಕತ್ತಾ
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಯ ಅಭಿಮಾನಿಗಳಿಗೆ ನಟಿ ಅಮೂಲ್ಯ ಮನವಿ
'ಚೆಲುವಿನ ಚಿತ್ತಾರ'ದ ನಟಿ ಅಮೂಲ್ಯ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆಪ್ಟೆಂಬರ್ 14) ಆಚರಣೆ ಮಾಡುತ್ತಿಲ್ಲ. ಈ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
''ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ.'' ಎಂದಿರುವ ಅಮೂಲ್ಯ ಹುಟ್ಟುಹಬ್ಬ ಮಾಡಿಕೊಳ್ಳದೆ ಇರುವ ವಿಷಯ ಹಂಚಿಕೊಡಿದ್ದಾರೆ.
ಹತ್ತು ವರ್ಷಗಳ ಹಿಂದೆ ನಟಿ ಅಮೂಲ್ಯ ಮತ್ತು ವೈಷ್ಣವಿ ಹೀಗಿದ್ದರು
''ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು.'' ಎಂದು ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಗಳಲ್ಲಿ ಅಮೂಲ್ಯ ಬರೆದುಕೊಂಡಿದ್ದಾರೆ.
'ಪರ್ವ' ಚಿತ್ರದ ಮೂಲಕ ಬಾಲ ನಟಿಯಾಗಿ ಚಿತ್ರರಂಗಕ್ಕೆ ಬಂದ ಅಮೂಲ್ಯ ನಂತರ ನಾಯಕಿಯಾದರು. 'ಚೆಲುವಿನ ಚಿತ್ತಾರ' ಅವರ ಕೆರಿಯರ್ ನ ಹಿಟ್ ಸಿನಿಮಾ. ಅದರ ಬಳಿಕ 'ನಾನು ನನ್ನ ಕನಸು', 'ಶ್ರಾವಣಿ ಸುಬ್ರಹ್ಮಣ್ಯ', 'ಗಜ ಕೇಸರಿ', 'ಮಳೆ', 'ಮಾಸ್ತಿ ಗುಡಿ' 'ಮುಗುಳು ನಗೆ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅಮೂಲ್ಯ ಪತಿ ಜಗದೀಶ್ ಗೆ ಸರ್ಪ್ರೈಸ್ ಕೊಟ್ಟ ದಾಸ ದರ್ಶನ್
ಸದ್ಯ, ಸಿನಿಮಾದಿಂದ ದೂರ ಇರುವ ಅಮೂಲ್ಯ ಗಂಡ, ಮನೆ ಅಂತ ಆರಾಮಾಗಿ ಇದ್ದಾರೆ.