Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಯ ಅಭಿಮಾನಿಗಳಿಗೆ ನಟಿ ಅಮೂಲ್ಯ ಮನವಿ
'ಚೆಲುವಿನ ಚಿತ್ತಾರ'ದ ನಟಿ ಅಮೂಲ್ಯ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆಪ್ಟೆಂಬರ್ 14) ಆಚರಣೆ ಮಾಡುತ್ತಿಲ್ಲ. ಈ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
''ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ.'' ಎಂದಿರುವ ಅಮೂಲ್ಯ ಹುಟ್ಟುಹಬ್ಬ ಮಾಡಿಕೊಳ್ಳದೆ ಇರುವ ವಿಷಯ ಹಂಚಿಕೊಡಿದ್ದಾರೆ.
ಹತ್ತು ವರ್ಷಗಳ ಹಿಂದೆ ನಟಿ ಅಮೂಲ್ಯ ಮತ್ತು ವೈಷ್ಣವಿ ಹೀಗಿದ್ದರು
''ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು.'' ಎಂದು ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಗಳಲ್ಲಿ ಅಮೂಲ್ಯ ಬರೆದುಕೊಂಡಿದ್ದಾರೆ.
'ಪರ್ವ' ಚಿತ್ರದ ಮೂಲಕ ಬಾಲ ನಟಿಯಾಗಿ ಚಿತ್ರರಂಗಕ್ಕೆ ಬಂದ ಅಮೂಲ್ಯ ನಂತರ ನಾಯಕಿಯಾದರು. 'ಚೆಲುವಿನ ಚಿತ್ತಾರ' ಅವರ ಕೆರಿಯರ್ ನ ಹಿಟ್ ಸಿನಿಮಾ. ಅದರ ಬಳಿಕ 'ನಾನು ನನ್ನ ಕನಸು', 'ಶ್ರಾವಣಿ ಸುಬ್ರಹ್ಮಣ್ಯ', 'ಗಜ ಕೇಸರಿ', 'ಮಳೆ', 'ಮಾಸ್ತಿ ಗುಡಿ' 'ಮುಗುಳು ನಗೆ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅಮೂಲ್ಯ ಪತಿ ಜಗದೀಶ್ ಗೆ ಸರ್ಪ್ರೈಸ್ ಕೊಟ್ಟ ದಾಸ ದರ್ಶನ್
ಸದ್ಯ, ಸಿನಿಮಾದಿಂದ ದೂರ ಇರುವ ಅಮೂಲ್ಯ ಗಂಡ, ಮನೆ ಅಂತ ಆರಾಮಾಗಿ ಇದ್ದಾರೆ.