Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧಿಕಾ ಪಂಡಿತ್ ಮದುವೆಯ ನಂತರ ಮೊದಲ 'ಚೂಡಿ ಪೂಜೆ'
ಕರಾವಳಿ ಭಾಗದಲ್ಲಿ ಈ 'ಚೂಡಿ ಪೂಜೆ' (ತುಳಸಿ ಪೂಜೆ) ಆಚರಣೆ ತಲೆತಲಾಂತರದಿಂದ ನಡೆದುಕೊಂಡು ಬಂದಿದೆ. ಶ್ರಾವಣ ಮಾಸದಲ್ಲಿ ಮುತ್ತೈದೆಯರು ಅದರಲ್ಲಿಯೂ ವಿಶೇಷವಾಗಿ ನವವಿವಾಹಿತರು 'ಚೂಡಿ ಪೂಜೆ' ಸಲ್ಲಿಸುತ್ತಾರೆ.
ಶ್ರಾವಣ ಮಾಸದಲ್ಲಿ ಪ್ರತಿ ಶುಕ್ರವಾರ ಹಾಗೂ ಭಾನುವಾರ ಈ ಪೂಜೆ ಮಾಡಲಾಗುತ್ತದೆ. ಅಂದು ಮನೆಯ ಮುಂದಿನ ತುಳಸಿ ಕಟ್ಟೆ, ಬಾವಿಯ ಕಟ್ಟೆ ಹಾಗೂ ಮನೆಯ ಹೊಸ್ತಿಲಿಗೆ ಪೂಜೆ ಸಲ್ಲಿಸುತ್ತಾರೆ. ಚೂಡಿ ಪೂಜೆ ಮಾಡಿದರೆ ವಿವಾಹಿತ ಮಹಿಳೆಯರಿಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಇಂತಹ ಚೂಡಿ ಪೂಜೆಯನ್ನ ಸ್ಯಾಂಡಲ್ ವುಡ್ ಪ್ರಿನ್ಸಸ್ ರಾಧಿಕಾ ಪಂಡಿತ್ ನೆರವೇರಿಸಿದ್ದಾರೆ.
ರಾಧಿಕಾ ಪಂಡಿತ್ ಹೊಸ ಚಿತ್ರಕ್ಕೆ ನಾಯಕ ಯಾರು?
ಭಾನುವಾರ ನಟಿ ರಾಧಿಕಾ ಪಂಡಿತ್ ತಮ್ಮ ಮನೆಯ ಮುಂದಿರುವ ತುಳಸಿ ಕಟ್ಟೆಗೆ ಪೂಜೆ ಸಲ್ಲಿಸಿದರು. ಈ ಫೋಟೋವನ್ನ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ವೇಳೆ ಸಂಪ್ರದಾಯಸ್ಥ ಗೃಹಿಣಿಯಾಗಿ ಕಂಗೊಳಿಸುತ್ತಿದ್ದ ರಾಧಿಕಾ, ಗಂಡನ ಮನೆಯಲ್ಲಿ ಮೊದಲ ಸಲ ಚೂಡಿ ಪೂಜೆಯನ್ನ ಆಚರಿಸಿದ್ದಾರೆ. ಅಷ್ಟೇ ಅಲ್ಲದೆ, ಮುಂದಿನ ವಾರ ವರಲಕ್ಷ್ಮಿ ಹಬ್ಬವಿದೆ. ಗಂಡನ ಮನೆಯ ಮೊದಲ ವರಲಕ್ಷ್ಮಿ ಹಬ್ಬವನ್ನ ಸ್ವಾಗತಿಸಲು ಸಜ್ಜಾಗಿದ್ದೇವೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಅದು ರಾಧಿಕಾ 'ಕಮ್ ಬ್ಯಾಕ್' ಸಿನಿಮಾ ಅಂತ ಕರೆಯಬೇಡಿ ಎಂದ ಯಶ್.!