Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಫಿ ದೊರೆ ಸಿದ್ದಾರ್ಥ್ ಸಾವು : ಸುದ್ದಿ ಕೇಳಿ ಆಘಾತಗೊಂಡ ರಾಗಿಣಿ
ಕಾಫಿ ಕಿಂಗ್ ಎಂದೇ ಜನಪ್ರಿಯತೆ ಪಡೆದಿದ್ದ ಸಿದ್ದಾರ್ಥ್ ನಿಧನರಾಗಿದ್ದಾರೆ. ಇವರ ಸಾವಿನ ಸುದ್ದಿ ಕೇಳಿ ನಟಿ ರಾಗಿಣಿ ದ್ವಿವೇದಿ ದುಃಖದಲ್ಲಿ ಇದ್ದಾರೆ. ಈ ಬಗ್ಗೆ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ರಾಗಿಣಿ ಮಾತನಾಡಿದ್ದಾರೆ.
''ವೈಯಕ್ತಿಕವಾಗಿ ಸಿದ್ದಾರ್ಥ್ ಅವರು ಅಷ್ಟೊಂದು ಗೊತ್ತಿಲ್ಲ. ಆದರೆ, ಒಮ್ಮೆ ಒಂದು ಕಾರ್ಯಕ್ರಮದಲ್ಲಿ ಅವರನ್ನು ಭೇಟಿ ಮಾಡಿದ್ದೆ. ಅವರು ತುಂಬ ಒಳ್ಳೆಯ ವ್ಯಕ್ತಿ. ತುಂಬ ಜನರಿಗೆ ಸಹಾಯ ಮಾಡಿದ್ದಾರೆ. ಈ ಘಟನೆ ತಿಳಿದು ನಾನು ಆಘಾತಗೊಂಡೆ.'' ಎಂದು ರಾಗಿಣಿ ಹೇಳಿದ್ದಾರೆ.
VG Siddhartha LIVE: 'ಟ್ಯಾಕ್ಸ್ ಟೆರರಿಸಂ'ಗೆ ಬಲಿಯಾದ್ರಾ ಸಿದ್ಧಾರ್ಥ?
''ಅಷ್ಟೊಂದು ದೊಡ್ಡ ಮಟ್ಟದ ವ್ಯಕ್ತಿ ಈ ರೀತಿ ನಿಧನ ಹೊಂದುವುದು ದುಃಖದ ಸಂಗತಿ. ಅವರು ಕಷ್ಟದಲ್ಲಿ ಇದ್ದೇನೆ ಎಂದು ಅವರ ಸುತ್ತ ಮುತ್ತ ಇರುವವರಿಗೆ ತಿಳಿಸಿದ್ದರೆ, ಯಾರಾದರೂ ಸಹಾಯ ಮಾಡುತ್ತಿದ್ದರೆನೋ. ಆದರೆ, ಇದನ್ನು ನೋಡಿ ತುಂಬ ಬೇಸರ ಆಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ.'' ಎಂದು ರಾಗಿಣಿ ಸಂತಾಪ ಸೂಚಿಸಿದ್ದಾರೆ.
ಎರಡು ವರ್ಷದ ಹಿಂದೆ ಒಂದು ಕಾರ್ಯಕ್ರಮದಲ್ಲಿ ಸಿದ್ದಾರ್ಥ್ ಮತ್ತು ರಾಗಿಣಿ ಇಬ್ಬರು ಅತಿಥಿಗಳಾಗಿ ಹೋಗಿದ್ದರಂತೆ. ಈ ವೇಳೆ ಸಿದ್ದಾರ್ಥ್ ಅವರನ್ನು ರಾಗಿಣಿ ಮೊದಲ ಬಾರಿಗೆ ಭೇಟಿ ಮಾಡಿದ್ದಾರೆ.
ಸಿದ್ಧಾರ್ಥ್ ಮಿಸ್ಸಿಂಗ್ ಹಿನ್ನಲೆ ಎಸ್ ಎಂ ಕೃಷ್ಣ ನಿವಾಸಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದ ಸಿದ್ದಾರ್ಥ್, ಮಂಗಳೂರಿನ ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಕಣ್ಮರೆಯಾಗಿದ್ದರು. ಮಂಗಳವಾರ ಬೆಳಗ್ಗಿನಿಂದ ರಾತ್ರಿವರೆಗೂ ಹುಡುಕಾಟ ನಡೆಸಲಾಗಿತ್ತು. ನೇತ್ರಾವತಿ ಸಮುದ್ರ ಸೇರುವ ಮೊದಲೇ ದಂಡೆಯಲ್ಲಿ ಶವ ಇಂದು (ಬುಧವಾರ) ಬೆಳಗ್ಗೆ ಪತ್ತೆಯಾಗಿದೆ.