Don't Miss!
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- News Bride Kidnap Video: ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವಿನ ಅಪಹರಣಕ್ಕೆ ಯತ್ನ: ವಿಡಿಯೋ
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ರಾಗಿಣಿ ಮೈಸೂರಿನ ವಿಕ್ರಂ ಆಸ್ಪತ್ರೆಗೆ ದಾಖಲು
ಚಂದನವನದ ತುಪ್ಪದ ಬೆಡಗಿ ರಾಗಿಣಿ ಅವರು ತಲೆಗೆ ಪೆಟ್ಟು ಮಾಡಿಕೊಂಡಿದ್ದಾರಂತೆ. ಅಂದಹಾಗೆ ಇದು ಹೇಗಾಯ್ತು ಅಂದುಕೊಂಡ್ರಾ?
ಹೌದು ಈಗಾಗಲೇ ಸೆಟ್ಟೇರಿ ಶೂಟಿಂಗ್ ಪ್ರಾರಂಭವಾಗಿರುವ ರಾಗಿಣಿ ಅವರ ಹೊಸ 'ನಾನೇ' 'ನೆಕ್ಸ್ಟ್ ಸಿಎಂ' ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಬಿದ್ದು ತಲೆಗೆ ತೀವ್ರ ಗಾಯ ಮಾಡಿಕೊಂಡಿದ್ದರು.
ನಿನ್ನೆ (ಆಗಸ್ಟ್ 23) ನಟಿ ರಾಗಿಣಿ ಅವರನ್ನು ಮೈಸೂರಿನ ವಿಕ್ರಂ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ರಾಗಿಣಿ ಅವರು ಚೇತರಿಸಿಕೊಂಡಿದ್ದಾರೆ.[ಇಂದಿನಿಂದ ತುಪ್ಪದ ಬೆಡಗಿ ರಾಗಿಣಿ ಸಿಎಂ]
ನಿರ್ದೇಶಕ ಮುಸ್ಸಂಜೆ ಮಹೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ನಾನೇ' 'ನೆಕ್ಸ್ಟ್ ಸಿಎಂ' ಚಿತ್ರದ ಫೈಟಿಂಗ್ ಸೀನ್ ಒಂದರ ಚಿತ್ರೀಕರಣದ ವೇಳೆ ಸಹ ಕಲಾವಿದರೊಬ್ಬರು ಬೀಸಿದ ಹಾಕಿ ಸ್ಟಿಕ್ ರಾಗಿಣಿ ಅವರ ತಲೆಗೆ ತಾಗಿ ಗಾಯವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.[ರಾಗಿಣಿ ಜೊತೆ ಅಶ್ಲೀಲ ಮಾತನ್ನಾಡಿದ್ದ ಉಮೇಶ್ ದುರಂತ ಸಾವು]
ಸಾಹಸ ನಿರ್ದೇಶಕ ಮಾಸ್ ಮಾದ ಅವರ ನಿರ್ದೇಶನದಲ್ಲಿ ಕಳೆದ ಮೂರು ದಿನಗಳಿಂದ ಮೈಸೂರಿನ ಹೊರವಲಯದ ಅಲೋಕದಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಸಲಾಗಿದ್ದು, ಇಂತಹ ಸಂದರ್ಭದಲ್ಲಿ ಈ ಒಂದು ಘಟನೆ ನಡೆದಿದೆ.
ರಾಗಿಣಿ ಅವರನ್ನು ಸಿಟಿ ಸ್ಕ್ಯಾನ್ ಹಾಗೂ ಎಂ ಆರ್ ಐ ಸ್ಕ್ಯಾನ್ ಗೆ ಒಳಪಡಿಸಿದ ವಿಕ್ರಂ ಆಸ್ಪತ್ರೆಯ ವೈದ್ಯರು ಅಂತಹ ಏನು ತೊಂದರೆ ಇಲ್ಲ ಆದಷ್ಟು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.[ತುಪ್ಪದ ಬೆಡಗಿ ರಾಗಿಣಿಗೆ ತುಳು ಚಿತ್ರದಲ್ಲಿ ನಟಿಸುವ ಆಸೆ]
Thnku
4
ur
wishes
...discharged
and
back
to
work
today
...
Nothing
would
happen
to
me
as
long
as
ur
love
remains
😘😘😘
pic.twitter.com/7cjezXPQ83
—
RAGINI
DWIVEDI
(@raginidwivedi24)
August
24,
2015
ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಾಪಸಾಗಿರುವ ನಟಿ ರಾಗಿಣಿ ಅವರು ಮತ್ತೆ 'ನಾನೇ' 'ನೆಕ್ಸ್ಟ್ ಸಿಎಂ' ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಂಡಿರುವುದಾಗಿ ಹಾಗೂ ಅಭಿಮಾನಿಗಳ ಹಾರೈಕೆಗೆ ನಾನು ಋಣಿಯಾಗಿರುತ್ತೇನೆ ಎಂದು ಟ್ವೀಟ್ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.