Don't Miss!
- News ಒಂದಲ್ಲ.. ಎರಡಲ್ಲ.. 128 ಲಕ್ಷ ಕೋಟಿ ರೂಪಾಯಿ ಲಾಭ!
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ರಕ್ಷಿತ್ ಶೆಟ್ಟಿ ನಡುವೆ ಬ್ರೇಕ್ ಅಪ್ ಸುದ್ದಿ ನಿನ್ನೆ ತಾನೇ ಕೇಳಿ ಬಂದಿತ್ತು. ರಶ್ಮಿಕಾ ಅವರ ಕುಟುಂಬದ ಮೂಲಗಳೆ ಈ ವಿಷಯವನ್ನು ಸ್ಪಷ್ಟ ಪಡಿಸಿತ್ತು. ಈ ಘಟನೆಯ ಬೆನ್ನಲ್ಲೆ ರಶ್ಮಿಕಾ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ರಶ್ಮಿಕಾ -ರಕ್ಷಿತ್ ಬ್ರೇಕ್ ಅಪ್: ಆಪ್ತ ಮೂಲಗಳಿಂದ ಬಂದ ಬ್ರೇಕಿಂಗ್ ನ್ಯೂಸ್!
ನಿನ್ನೆ (ಭಾನುವಾರ) ತುಮಕೂರಿನ ಸಿದ್ಧಗಂಗಾ ಮಠಕ್ಕೆ ಆಗಮಿಸಿದ್ದ ರಶ್ಮಿಕಾ ಶ್ರೀ ಶಿವಕುಮಾರ ಸ್ವಾಮಿಜಿ ಅವರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ರಶ್ಮಿಕಾ ಅವರ ತಾಯಿ ಕೂಡ ಅವರ ಜೊತೆಗೆ ಇದ್ದರು. ಮಠಕ್ಕೆ ಬಂದ ನಟಿಯನ್ನು ಕಂಡು ಭಕ್ತರು ಸಹ ಅವರ ಜೊತೆಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು.
ಅಂದಹಾಗೆ, ಇನ್ನೊಂದು ಕಡೆ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಬ್ರೇಕ್ ಅಪ್ ಸುದ್ದಿ ದೊಡ್ಡ ಮಟ್ಟದಲ್ಲಿ ಹರಿದಾಡಿದೆ. ಇಬ್ಬರ ಕುಟುಂಬದ ನಡುವೆ ಹೊಂದಾಣಿಕೆ ತೊಂದರೆಯಾಗಿದ್ದು, ಚರ್ಚೆ ನಡೆಸಿ ಒಂದು ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆಯಂತೆ.
'ಸಿದ್ದಗಂಗಾ ಮಠ'ದಲ್ಲಿ ಶಿವಣ್ಣನ 'ಟಗರು' ಶೂಟಿಂಗ್!
ಸದ್ಯ ವೈಯಕ್ತಿಕ ಜೀವನಕ್ಕಿಂತ ಸಿನಿಮಾಗಳಲ್ಲಿ ಹೆಚ್ಚು ಗಮನ ನೀಡಲು ನಿರ್ಧಾರ ಮಾಡಿರುವ ರಶ್ಮಿಕಾ ಮಂದಣ್ಣ ಅದಕ್ಕೂ ಮುಂಚೆ ಸಿದ್ಧಗಂಗಾ ಮಠಕ್ಕೆ ಬಂದು ಸ್ವಾಮಿಜಿಗಳ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ.