Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸನದಲ್ಲಿ ಮಣ್ಣಿನ ಮಗನ ವಿರುದ್ದ ಮಣ್ಣಿನ ಮಗಳು?
ನಟಿ ಶ್ರುತಿ ಅವರು ಕಳೆದ ವರ್ಷ ನಾನಾ ವೈಯಕ್ತಿಕ ಕಾರಣಗಳಿಂದಾಗಿ ಬಹಳಷ್ಟು ಸುದ್ದಿ ಮಾಡಿದವರು. ಶ್ರುತಿ ಅವರ ಎರಡನೇ ಮದುವೆಯನ್ನು ಕೌಟುಂಬಿಕ ನ್ಯಾಯಾಲಯ ಅಸಿಂಧುಗೊಳಿಸಿದ್ದು, ಬಳಿಕ ಅವರು ಪರಿತಪಿಸಿದ್ದು ಎಲ್ಲವನ್ನೂ ಅವರ ಅಭಿಮಾನಿಗಳು ನೋಡಿದ್ದರು.
ಈಗ ಶ್ರುತಿ ಅವರು ಆ ಎಲ್ಲಾ ಕಹಿ ಘಟನೆಗಳಿಂದ ಹೊರಬಂದಿದ್ದಾರೆ. ಹದಿನಾರನೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. [ಲೋಕಸಭೆ ಚುನಾವಣೆ ಅಖಾಡಕ್ಕೆ ರಂಗಾಯಣ ರಘು?]
ಇನ್ನು ಶ್ರುತಿ ಅವರ ತಾಯಿಯ ತವರೂರು ಹೊಳೆನರಸಿಪುರ. ದೇವೇಗೌಡರ ಹುಟ್ಟೂರು ಹೊಳೆನರಸಿಪುರ. ಇಬ್ಬರೂ ಹೊಳೆನರಸಿಪುರದವರು ಎಂಬುದನ್ನು ಬಿಟ್ಟರೆ ಇನ್ಯಾವುದೇ ವಿಚಾರದಲ್ಲೂ ಸಾಮ್ಯತೆ ಕಾಣುವುದಿಲ್ಲ. ಬಿಜೆಪಿ ಮುಖಂಡರು ಶ್ರುತಿ ಅವರ ಜೊತೆ ಈಗಾಗಲೆ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂಬುದು ಲೇಟೆಸ್ಟ್ ಸಮಾಚಾರ.
ಕೊನೆಯ ಘಳಿಗೆಯಲ್ಲಿ ಬಿಜೆಪಿಯಿಂದ ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಶ್ರುತಿ ಅವರ ಹೆಸರಂತೂ ಕೇಳಿಬಂದಿದೆ. ಒಟ್ಟಾರೆಯಾಗಿ ಶ್ರುತಿ ಅವರಿಗೆ ಸೀಟು ಸಿಕ್ಕಿ ಒಂದು ವೇಳೆ ಗೆದ್ದುಬಿಟ್ಟರೆ ಪವಾಡವೇ ನಡೆದುಬಿಡುತ್ತದೆ.