ಹಾಸನದಲ್ಲಿ ಮಣ್ಣಿನ ಮಗನ ವಿರುದ್ದ ಮಣ್ಣಿನ ಮಗಳು?
ನಟಿ ಶ್ರುತಿ ಅವರು ಕಳೆದ ವರ್ಷ ನಾನಾ ವೈಯಕ್ತಿಕ ಕಾರಣಗಳಿಂದಾಗಿ ಬಹಳಷ್ಟು ಸುದ್ದಿ ಮಾಡಿದವರು. ಶ್ರುತಿ ಅವರ ಎರಡನೇ ಮದುವೆಯನ್ನು ಕೌಟುಂಬಿಕ ನ್ಯಾಯಾಲಯ ಅಸಿಂಧುಗೊಳಿಸಿದ್ದು, ಬಳಿಕ ಅವರು ಪರಿತಪಿಸಿದ್ದು ಎಲ್ಲವನ್ನೂ ಅವರ ಅಭಿಮಾನಿಗಳು ನೋಡಿದ್ದರು.
ಈಗ ಶ್ರುತಿ ಅವರು ಆ ಎಲ್ಲಾ ಕಹಿ ಘಟನೆಗಳಿಂದ ಹೊರಬಂದಿದ್ದಾರೆ. ಹದಿನಾರನೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. [ಲೋಕಸಭೆ ಚುನಾವಣೆ ಅಖಾಡಕ್ಕೆ ರಂಗಾಯಣ ರಘು?]

ಇನ್ನು ಶ್ರುತಿ ಅವರ ತಾಯಿಯ ತವರೂರು ಹೊಳೆನರಸಿಪುರ. ದೇವೇಗೌಡರ ಹುಟ್ಟೂರು ಹೊಳೆನರಸಿಪುರ. ಇಬ್ಬರೂ ಹೊಳೆನರಸಿಪುರದವರು ಎಂಬುದನ್ನು ಬಿಟ್ಟರೆ ಇನ್ಯಾವುದೇ ವಿಚಾರದಲ್ಲೂ ಸಾಮ್ಯತೆ ಕಾಣುವುದಿಲ್ಲ. ಬಿಜೆಪಿ ಮುಖಂಡರು ಶ್ರುತಿ ಅವರ ಜೊತೆ ಈಗಾಗಲೆ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂಬುದು ಲೇಟೆಸ್ಟ್ ಸಮಾಚಾರ.
ಕೊನೆಯ ಘಳಿಗೆಯಲ್ಲಿ ಬಿಜೆಪಿಯಿಂದ ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಶ್ರುತಿ ಅವರ ಹೆಸರಂತೂ ಕೇಳಿಬಂದಿದೆ. ಒಟ್ಟಾರೆಯಾಗಿ ಶ್ರುತಿ ಅವರಿಗೆ ಸೀಟು ಸಿಕ್ಕಿ ಒಂದು ವೇಳೆ ಗೆದ್ದುಬಿಟ್ಟರೆ ಪವಾಡವೇ ನಡೆದುಬಿಡುತ್ತದೆ.


Click it and Unblock the Notifications











