Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಶ್ರುತಿ ಹರಿಹರನ್ ನೋಡಲು ಮುಗಿಬಿದ್ದ ಅಭಿಮಾನಿಗಳು
ಗೋಲ್ಡನ್ ಗ್ರೀನ್ ಎಂಟರ್ ಪ್ರೈಸಸ್ ಹಾಗೂ ದಿ ಜ್ಯುವೆಲರಿ ಶೋ ಸಂಸ್ಥೆಯಿಂದ ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನಲ್ ಹಾಲ್ನಲ್ಲಿ ಆಯೋಜಿಸಿದ ಚಿನ್ನಾಭರಣ ಮತ್ತು ವಜ್ರಾಭರಣ ಮೇಳಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಹರಿಹರನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರುತಿ ಹರಿಹರನ್ ಮಾತನಾಡಿ, ''ಶಿವಮೊಗ್ಗದಲ್ಲಿ ಮೊದಲ ಬಾರಿಗೆ ವರಮಹಾಲಕ್ಷ್ಮಿ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ. ಚಿನ್ನ ಹಾಗೂ ಚಿನ್ನದ ಆಭರಣಗಳ ಕುರಿತ ಸರಿಯಾದ ಮಾಹಿತಿ, ಬಗೆಬಗೆಯ ವಿನ್ಯಾಸಗಳನ್ನು ಕಣ್ತುಂಬಿಕೊಳ್ಳುವ ಸದಾವಕಾಶ ಇಲ್ಲಿ ಸಿಗಲಿದೆ. ಹಾಗಾಗಿ ಶಿವಮೊಗ್ಗದ ಜನತೆ ಒಮ್ಮೆ ಇಲ್ಲಿಗೆ ಭೇಟಿ ನೀಡಿ'' ಎಂದು ಮನವಿ ಮಾಡಿದರು.
ಕೇಳುವ ಪ್ರಶ್ನೆಗಳಿಗೆ 'ಥಟ್ ಅಂತ' ಉತ್ತರ ಹೇಳ್ತಾರಾ ನಟಿ ಶ್ರುತಿ ಹರಿಹರನ್.?
ನಟಿ ಶ್ರುತಿ ನೋಡಲು ಮುಗಿಬಿದ್ದ ಅಭಿಮಾನಿಗಳು:
ನಟಿ ಶ್ರುತಿ ಹರಿಹರನ್ ಶಿವಮೊಗ್ಗಗೆ ಆಗಮಿಸಿದ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಜಮಾಯಿಸಿದ್ದರು. ಅವರೊಡನೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಅಭಿಮಾನಿಗಳಿಗೆ ಬೇಸರ ಮಾಡದ ಶ್ರುತಿ ಹರಿಹರನ್ ಕೂಡ ಎಲ್ಲರೊಂದಿಗೆ ಫೋಟೋಗೆ ಪೋಸ್ ನೀಡಿದರು.