Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರುತಿ ಹರಿಹರನ್ ಅವರ ಮುಂದಿನ ಚಿತ್ರ ಯಾರ ಜೊತೆ?
'ಲೂಸಿಯಾ' ಬೆಡಗಿ ನಟಿ ಶ್ರುತಿ ಹರಿಹರನ್ ಅವರು ಸದ್ಯಕ್ಕೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಿತ್ರದ ಯಶಸ್ಸಿನ ಮೂಲಕ ಗೆಲುವಿನ ನಗೆ ಬೀರುತ್ತಿದ್ದಾರೆ.
ಇದೀಗ ಇದೇ ಖುಷಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ಮುಂದಿನ ಸಿನಿಮಾ 'ಉಪೇಂದ್ರ ಮತ್ತೆ ಹುಟ್ಟಿ ಬಾ, ಇಂತಿ ಪ್ರೇಮ' ಚಿತ್ರದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಕ್ಕಾಗಿ ಡಬ್ಬಲ್ ಖುಷಿಯಾಗಿದ್ದಾರೆ.[ಉಪ್ಪಿಗೆ ಮತ್ತೆ ಹುಟ್ಟಿ ಬಾ ಅಂತ ಪತ್ರ ಬರೆದಿದ್ದು ಪ್ರೇಮಾ ಅವರಾ?]
ಹೌದು ಉಪೇಂದ್ರ ಅವರು ತೆಲುಗಿನ 'ಸೊಗ್ಗಾಡೆ ಚಿನ್ನಿನಾಯನ' ಚಿತ್ರದ ರೀಮೇಕ್ ಮಾಡುತ್ತಿದ್ದು, ಈ ಚಿತ್ರಕ್ಕೆ ಈಗಾಗಲೇ ಖ್ಯಾತ ನಟಿ ಪ್ರೇಮ ಅವರು ಆಯ್ಕೆಯಾಗಿದ್ದಾರೆ. ಇದೀಗ ನಟಿ ಶ್ರುತಿ ಹರಿಹರನ್ ಅವರು ಕೂಡ ಸೇರ್ಪಡೆಗೊಂಡಿದ್ದಾರೆ.
ಈ ಚಿತ್ರದಲ್ಲಿ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಮಿಂಚಲಿದ್ದು, ತೆಲುಗಿನಲ್ಲಿ ಲಾವಣ್ಯ ತ್ರಿಪಾಟಿ ಮಾಡಿದ್ದ ಪಾತ್ರವನ್ನು ನಟಿ ಶ್ರುತಿ ಹರಿಹರನ್ ಅವರು ನಿರ್ವಹಿಸಿದರೆ, ನಟಿ ರಮ್ಯಕೃಷ್ಣ ಮಾಡಿದ್ದ ಪಾತ್ರಕ್ಕೆ ನಟಿ ಪ್ರೇಮಾ ಅವರು ಜೀವ ತುಂಬಲಿದ್ದಾರೆ.['ಉಪೇಂದ್ರ' ಮತ್ತೆ ಹುಟ್ಟಿ ಬರ್ಬೇಕಂತೆ.! ಇದು 'ಪ್ರೇಮ' ಬಯಕೆ.!]
ಒಬ್ಬ ದೊಡ್ಡ ನಟನೊಂದಿಗೆ ತೆರೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದ್ದಕ್ಕೆ ಫುಲ್ ಖುಷ್ ಆಗಿರುವ ನಟಿ ಶ್ರುತಿ ಹರಿಹರನ್ ಅವರು 'ನಾನೊಬ್ಬಳು ನಟಿಯೇ ಹೊರತು, ಹೀರೋಯಿನ್ ಎಂಬ ವಸ್ತುವಲ್ಲ, ಎಲ್ಲಾ ರೀತಿಯ ಚಿತ್ರದಲ್ಲೂ ಹೊಸ ಪ್ರಯೋಗ ಮಾಡಲು ಇಚ್ಛಿಸುತ್ತೇನೆ' ಎಂದಿದ್ದಾರೆ.
ಈ ಚಿತ್ರಕ್ಕಾಗಿ ಎಲ್ಲಾ ಸಿದ್ಧತೆಗಳು ಈಗಿನಿಂದಲೇ ನಡೆದಿದ್ದು, ಜೂ.19 ಕ್ಕೆ ಚಿತ್ರದ ಮುಹೂರ್ತ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಜೂನ್ 24ರಿಂದ ಚಿತ್ರದ ಚಿತ್ರೀಕರಣ ಆರಂಭಿಸಲು 'ಉಪೇಂದ್ರ ಮತ್ತೆ ಹುಟ್ಟಿ ಬಾ, ಇಂತಿ ಪ್ರೇಮ' ಚಿತ್ರತಂಡ ನಿರ್ಧರಿಸಿದೆ.[ಉಪೇಂದ್ರಗೆ 'H2O' ಕುಡಿಸಿದವರು ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟರೆ.?]
ಶ್ರೀರಾಮ ಅವರು ಬಂಡವಾಳ ಹೂಡುತ್ತಿರುವ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಅವರು ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. 'H2O' ಚಿತ್ರದ ಖ್ಯಾತಿಯ ನಿರ್ದೇಶಕ ಎನ್ ಲೋಕನಾಥ್ ಅವರು ಆಕ್ಷನ್-ಕಟ್ ಹೇಳುತ್ತಿದ್ದಾರೆ.