Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ತೆಲುಗು ಚಿತ್ರರಂಗದತ್ತ ಹೊರಟ 'ಯಜಮಾನ'ನ ಬಸಣ್ಣಿ
Recommended Video
ನಟಿ ತಾನ್ಯ ಹೋಪ್ ಈಗ ಸ್ಯಾಂಡಲ್ ವುಡ್ ಬಸಣ್ಣಿ ಅಂತಾನೆ ಖ್ಯಾತಿ ಗಳಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಯಜಮಾನ' ಚಿತ್ರದಲ್ಲಿ ಬಸಣ್ಣಿ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನ ಕದ್ದಿದ್ದರು ತಾನ್ಯಾ. 'ಯಜಮಾನ' ಚಿತ್ರದ ನಂತರ ತಾನ್ಯ ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಟಿಯಾಗಿದ್ದಾರೆ.
ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ತಾನ್ಯಾ ಈಗ ಮತ್ತೆ ತೆಲುಗು ಚಿತ್ರರಂಗದ ಕಡೆ ಮುಖ ಮಾಡಿದ್ದಾರೆ. ಹೌದು, ಚಂದನವನದ ಬಹು ನಿರೀಕ್ಷೆಯ 'ಅಮರ್' ಚಿತ್ರದ ರಿಲೀಸ್ ಗೆ ಎದುರು ನೋಡುತ್ತಿರುವ ತಾನ್ಯಾ ಈಗ ತೆಲುಗು ಚಿತ್ರರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಸಿನಿ ಇಂಡಸ್ಟ್ರಿಗೆ ಶಾಕ್ ನೀಡಿರುವ ತಾನ್ಯ ಹೋಪೆ ಫ್ಯಾಮಿಲಿ ಬ್ಯಾಕ್ ಗ್ರೌಂಡ್ ಏನು?
ತೆಲುಗು ನಟ ಸಂದೀಪ್ ಕಿಶನ್ ನಾಯಕನಾಗಿ ಅಭಿನಯಿಸುತ್ತಿರುವ ಇನ್ನು ಹೆಸರಿಡದ ಸಿನಿಮಾಗೆ ಕನ್ನಡತಿ ತಾನ್ಯಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರಕ್ಕೆ ಮೋಹನ್ ಚೊಚ್ಚಲ ನಿರ್ದೇಶನ ಮಾಡುತ್ತಿದ್ದಾರೆ. ಮುಂದಿನ ತಿಂಗಳು ಜೂನ್ ಮೊದಲ ವಾರದಲ್ಲಿ ಚಿತ್ರ ಸೆಟ್ಟೇರಲಿದ್ದು ಚಿತ್ರೀಕರಣ ಕೂಡ ಪ್ರಾರಂಭವಾಗಲಿದೆ.
ತಾನ್ಯಾ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ್ದರು. ಮೊದಲು ತೆಲುಗಿನ 'ಅಪ್ಪಾಟ್ಲೋ ಒಕದುಂದೇವಾಡು' ಸಿನಿಮಾದಲ್ಲಿ ಕಾಣಿಸಿಕೊಂಡ ತಾನ್ಯಾ ನಂತರ 'ಪಟೇಲ್ ಎಸ್ ಐ ಆರ್', 'ಪೇಪರ್ ಬಾಯ್' ಸಿನಿಮಾಗಳಲ್ಲಿ ಮಿಂಚಿದ್ದಾರೆ. ಇನ್ನು 'ತದಮ್' ಮೂಲಕ ತಮಿಳು ಚಿತ್ರರಂಗದಲ್ಲೂ ಕಾಣಿಸಿಕೊಂಡಿದ್ದಾರೆ.
ಕನ್ನಡದಲ್ಲಿ 'ಯಜಮಾನ' ಚಿತ್ರ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. 'ಅಮರ್' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಜೊತೆಗೆ ಚಿರಂಜೀವಿ ಸರ್ಜಾ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ 'ಖಾಕಿ' ಸಿನಿಮಾ ತಾನ್ಯಾ ಕೈಯಲ್ಲಿದೆ. ಇದ್ರ ಜೊತೆಗೆ ಮತ್ತೆ ತೆಲುಗು ಚಿತ್ರರಂಗದಲ್ಲೂ ಮಿಂಚುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.