Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ತೆಲುಗು ಚಿತ್ರರಂಗದತ್ತ ಹೊರಟ 'ಯಜಮಾನ'ನ ಬಸಣ್ಣಿ
Recommended Video
ನಟಿ ತಾನ್ಯ ಹೋಪ್ ಈಗ ಸ್ಯಾಂಡಲ್ ವುಡ್ ಬಸಣ್ಣಿ ಅಂತಾನೆ ಖ್ಯಾತಿ ಗಳಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಯಜಮಾನ' ಚಿತ್ರದಲ್ಲಿ ಬಸಣ್ಣಿ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನ ಕದ್ದಿದ್ದರು ತಾನ್ಯಾ. 'ಯಜಮಾನ' ಚಿತ್ರದ ನಂತರ ತಾನ್ಯ ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಟಿಯಾಗಿದ್ದಾರೆ.
ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ತಾನ್ಯಾ ಈಗ ಮತ್ತೆ ತೆಲುಗು ಚಿತ್ರರಂಗದ ಕಡೆ ಮುಖ ಮಾಡಿದ್ದಾರೆ. ಹೌದು, ಚಂದನವನದ ಬಹು ನಿರೀಕ್ಷೆಯ 'ಅಮರ್' ಚಿತ್ರದ ರಿಲೀಸ್ ಗೆ ಎದುರು ನೋಡುತ್ತಿರುವ ತಾನ್ಯಾ ಈಗ ತೆಲುಗು ಚಿತ್ರರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಸಿನಿ ಇಂಡಸ್ಟ್ರಿಗೆ ಶಾಕ್ ನೀಡಿರುವ ತಾನ್ಯ ಹೋಪೆ ಫ್ಯಾಮಿಲಿ ಬ್ಯಾಕ್ ಗ್ರೌಂಡ್ ಏನು?
ತೆಲುಗು ನಟ ಸಂದೀಪ್ ಕಿಶನ್ ನಾಯಕನಾಗಿ ಅಭಿನಯಿಸುತ್ತಿರುವ ಇನ್ನು ಹೆಸರಿಡದ ಸಿನಿಮಾಗೆ ಕನ್ನಡತಿ ತಾನ್ಯಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರಕ್ಕೆ ಮೋಹನ್ ಚೊಚ್ಚಲ ನಿರ್ದೇಶನ ಮಾಡುತ್ತಿದ್ದಾರೆ. ಮುಂದಿನ ತಿಂಗಳು ಜೂನ್ ಮೊದಲ ವಾರದಲ್ಲಿ ಚಿತ್ರ ಸೆಟ್ಟೇರಲಿದ್ದು ಚಿತ್ರೀಕರಣ ಕೂಡ ಪ್ರಾರಂಭವಾಗಲಿದೆ.
ತಾನ್ಯಾ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ್ದರು. ಮೊದಲು ತೆಲುಗಿನ 'ಅಪ್ಪಾಟ್ಲೋ ಒಕದುಂದೇವಾಡು' ಸಿನಿಮಾದಲ್ಲಿ ಕಾಣಿಸಿಕೊಂಡ ತಾನ್ಯಾ ನಂತರ 'ಪಟೇಲ್ ಎಸ್ ಐ ಆರ್', 'ಪೇಪರ್ ಬಾಯ್' ಸಿನಿಮಾಗಳಲ್ಲಿ ಮಿಂಚಿದ್ದಾರೆ. ಇನ್ನು 'ತದಮ್' ಮೂಲಕ ತಮಿಳು ಚಿತ್ರರಂಗದಲ್ಲೂ ಕಾಣಿಸಿಕೊಂಡಿದ್ದಾರೆ.
ಕನ್ನಡದಲ್ಲಿ 'ಯಜಮಾನ' ಚಿತ್ರ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. 'ಅಮರ್' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಜೊತೆಗೆ ಚಿರಂಜೀವಿ ಸರ್ಜಾ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ 'ಖಾಕಿ' ಸಿನಿಮಾ ತಾನ್ಯಾ ಕೈಯಲ್ಲಿದೆ. ಇದ್ರ ಜೊತೆಗೆ ಮತ್ತೆ ತೆಲುಗು ಚಿತ್ರರಂಗದಲ್ಲೂ ಮಿಂಚುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.