ಮರೆಯಾದ 'ಸುದರ್ಶನ'ನಿಗೆ ಕಂಬನಿ ಮಿಡಿದ ಕಲಾವಿದರು

By Bharath Kumar

ಕನ್ನಡದ ಹಿರಿಯ ನಟ ಆರ್.ಎನ್.ಸುದರ್ಶನ್ ಅವರು ಇನ್ನು ನೆನಪು ಮಾತ್ರ. ಸುಮಾರು 6 ದಶಕಗಳಿಂದ ಕನ್ನಡ ಚಿತ್ರಪ್ರೇಮಿಗಳನ್ನ ರಂಜಿಸುತ್ತಾ ಕನ್ನಡಿಗರ ಮನದಲ್ಲಿ ಜಾಗ ಪಡೆದುಕೊಂಡಿದ್ದ 'ವಿಜಯನಗರದ ವೀರಪುತ್ರ' ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿ ಅಪಾರ ಕೀರ್ತಿ ಗಳಿಸಿಕೊಂಡಿದ್ದರು.

ನಟ, ಕಂಠದಾನ ಕಲಾವಿದ, ನಿರ್ಮಾಪಕ, ಗಾಯಕನಾಗಿ ಸ್ಯಾಂಡಲ್ ವುಡ್ ಗೆ ಇವರ ಸೇವೆ ಅಪಾರ. ಈ ಸೇವೆಗೆ ಕನಾರ್ಟಕ ಸರ್ಕಾರ, ಕನ್ನಡ ಚಲನಚಿತ್ರರಂಗ ಕನಿಷ್ಠ ಗೌರವ ನೀಡಬೇಕಾಗಿರುವುದು ಧರ್ಮ ಮತ್ತು ಕರ್ತವ್ಯ ಕೂಡ.

Kannada Celebrities Condolence towards sudarshan death

ಸುದರ್ಶನ್ ಅವರಿಗೆ ಸಂತಾಪ ಸೂಚಿಸಿದ ನಟಿ ಜಯಮಾಲ'' ಸುದರ್ಶನ್ ಅವರ ಸಾವು ನನಗೆ ತುಂಬ ದುಃಖ ತಂದಿದೆ. ಅವರು ಚೆನ್ನೈನಲ್ಲಿದ್ದರು, ಅವರು ಮರಳಿ ನಮ್ಮ ನಾಡಿಗೆ ಬಂದರು. 'ಸತಿ ಸಲೋಚನ' ಚಿತ್ರಕ್ಕೆ ಕೊಡುಗೆ ನೀಡಿದವರಿಗೆ ಗೌರವಿಸಬೇಕು. ಸಿನಿಮಾ ಎನ್ನುವುದು ನಮ್ಮ ಕುಟುಂಬ'' ಎಂದಿದ್ದಾರೆ.

Kannada Celebrities Condolence towards sudarshan death

ಇನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ ''ಅವರ ಇಡೀ ಕುಟುಂಬ ಸಿನಿಮಾರಂಗಕ್ಕೆ ದಶಕಗಳ ಕಾಲ ಸೇವೆ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರು ಹಿರಿಯ ಕಲಾವಿದರಾಗಿದ್ದರೂ, ತುಂಬ ಶ್ರದ್ಧೆಯಿಂದ ಬದುಕಿದ್ದವರು. ಸರ್ಕಾರ ಮತ್ತು ಉದ್ಯಮಿ ಅವರಿಗೆ ಗೌರವ ನೀಡಬೇಕು'' ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಜಗ್ಗೇಶ್ ಅವರು ಟ್ವೀಟ್ ಮಾಡಿ ಸುದರ್ಶನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

Kannada Celebrities Condolence towards sudarshan death

ಹಿರಿಯ ನಟ ಶಿವರಾಂ ಮಾತನಾಡಿ ''60 ವರ್ಷ ಸಿನಿಮಾ ರಂಗದಲ್ಲಿ ಕೆಲಸ ಮಾಡಿದ್ದಾರೆ. ಅವರ ಕುಟುಂಬ ಪೂರ್ತಿ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಇವರ ಸೇವೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನ ನೀಡಿ ರಾಜ್ಯ ಸರ್ಕಾರ ಗೌರವಿಸಿದೆ'' ಎಂದು ಸ್ನೇಹಿತನನ್ನ ನೆನೆಸಿಕೊಂಡರು.

More from Filmibeat

English summary
Kannada Celebrities have expressed Condolence towards death of Senior Actor Sudarshan
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X