Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದಿಂದ ದುನಿಯಾ ವಿಜಯ್ ಬಹಿಷ್ಕರಿಸಬೇಕು ಎಂದು ಒತ್ತಾಯ
ಪರಪ್ಪನ ಅಗ್ರಹಾರದಲ್ಲಿ ಇರುವ ದುನಿಯಾ ವಿಜಯ್ ಗೆ ಸಪ್ಟೆಂಬರ್ 26ರ ವರೆಗೆ ಜೈಲು ವಾಸ ಕಾಯಂ ಆಗಿದೆ. ಇತ್ತ ಚಿತ್ರರಂಗದಿಂದ ಅವರನ್ನು ಬಹಿಷ್ಕಾರ ಮಾಡಬೇಕು ಎಂಬ ಒತ್ತಾಯ ಜಾಸ್ತಿಯಾಗಿದೆ.
ನಿನ್ನೆ ದುನಿಯಾ ವಿಜಯ್ ಪ್ರಕರಣದ ಬಗ್ಗೆ ಮಾತನಾಡಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ''ಇದು ದುನಿಯಾ ವಿಜಯ್ ಅವರ ವೈಯಕ್ತಿಯ ವಿಚಾರ ಹೀಗಾಗಿ ಚಿತ್ರರಂಗದಿಂದ ಬಹಿಷ್ಕಾರ ಮಾಡಲು ಸಾಧ್ಯವಿಲ್ಲ ಎಂದಿದ್ದರು.
ಇನ್ನೂ ಎರಡು ದಿನ ಜೈಲಿನಲ್ಲೇ ಇರಬೇಕು 'ಕರಿಚಿರತೆ'
ಆದರೆ, ಇದೀಗ ಕನ್ನಡ ಚಳುವಳಿ ಒಕ್ಕೂಟ ದುನಿಯಾ ವಿಜಯ್ ವಿರುದ್ಧ ಫಿಲ್ಮ್ ಚೆಂಬರ್ ಗೆ ದೂರು ನೀಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಭಾಮಾ ಹರೀಶ್ ಅವರಿಗೆ ಮನವಿ ಪತ್ರ ನೀಡಿದೆ. ಅದರಲ್ಲಿ ದುನಿಯಾ ವಿಜಯ್ ನನ್ನು ಚಿತ್ರರಂಗದಿಂದ ಹೊರಗೆ ಹಾಕಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇದರೊಂದಿಗೆ ಕಿಡ್ಲಾಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ವಿರುದ್ಧ ನಿನ್ನೆ ಪಾನಿಪುರಿ ಕಿಟ್ಟಿ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದರು.
ಚಿತ್ರರಂಗದಿಂದ ದುನಿಯಾ ವಿಜಿ ಬಹಿಷ್ಕಾರ ಸಾಧ್ಯವಿಲ್ಲ
ಈ ಬಗ್ಗೆ ಮಾತನಾಡಿರುವ ಚಿನ್ನೇಗೌಡ ''ದುನಿಯಾ ವಿಜಿ ಪ್ರಕರಣ ಕೊರ್ಟ್ ನಲ್ಲಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದು ಅವರ ವೈಯಕ್ತಿಕ ವಿಚಾರ ಆಗಿರುವುದರಿಂದ ಚಿತ್ರರಂಗದಿಂದ ಬಹಿಷ್ಕಾರ ಸಾಧ್ಯವಿಲ್ಲ'' ಎಂದು ತಿಳಿಸಿದ್ದಾರೆ.