Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರತೆಯನ್ನು ದತ್ತು ಪಡೆದ ಹಾಸ್ಯ ನಟ ಚಿಕ್ಕಣ್ಣ
ನಟ ಚಿಕ್ಕಣ್ಣ ತೆರೆ ಮೇಲೆ ಬಂದರೇ ಸಾಕು ಸಿನಿಮಾ ನೋಡುವ ಪ್ರೇಕ್ಷಕರು ಬಿದ್ದು ಬಿದ್ದು ನಗುತ್ತಾರೆ. ಸದ್ಯ, ಕನ್ನಡದ ಬಹು ಬೇಡಿಕೆಯ ಹಾಸ್ಯ ನಟ ಅಂದರೆ ಅದು ಚಿಕ್ಕಣ್ಣ.
ಸಿನಿಮಾದಲ್ಲಿ ಕಾಮಿಡಿ ಮಾಡುವುದು ಮಾತ್ರವಲ್ಲದೆ ಸಿನಿಮಾ ಆಚೆಗಿನ ತಮ್ಮ ಕೆಲಸದಿಂದ ಇದೀಗ ಚಿಕ್ಕಣ್ಣ ಮೆಚ್ಚುಗೆ ಪಡೆದಿದ್ದಾರೆ. ಚಿಕ್ಕಣ್ಣ ಮೈಸೂರು ಮೃಗಾಲಯದಲ್ಲಿ ಚಿರತೆಯನ್ನು ದತ್ತು ಪಡೆದಿದ್ದಾರೆ.
35 ಸಾವಿರ ಹಣ ನೀಡಿ ಒಂದು ವರ್ಷದ ಅವಧಿಗೆ ಚಿರತೆಯನ್ನು ಚಿಕ್ಕಣ್ಣ ದತ್ತು ಪಡೆದಿದ್ದಾರೆ. ತಾವು ದತ್ತು ತೆಗೆದುಕೊಂಡ ಚಿರತೆಗೆ ಭೈರ ಎಂದು ನಾಮಕರಣ ಮಾಡಿದ್ದಾರೆ.
ಚಿಕ್ಕಣ್ಣ ಮಾತ್ರವಲ್ಲದೆ ಅವರ ಜೊತೆಗಿನ ಹಲವು ಸ್ನೇಹಿತರು ಪ್ರಾಣಿಗಳ ದತ್ತು ಸ್ವೀಕಾರ ಪಡೆದಿದ್ದಾರೆ. ಚಿಕ್ಕಣ್ಣ ಸ್ನೇಹಿತರಾದ ಸಿದ್ದೇಗೌಡ, ಮೋಹನ್ ಕುಮಾರ್, ತಿಮ್ಮಯ್ಯ, ಸೋಮು ಕೆಲ ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ.
ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿ ನಟ ಚಿಕ್ಕಣ್ಣ ಹಾಗೂ ಅವರ ಸ್ನೇಹಿತರು ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ.
ಈ ಹಿಂದೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಸೃಜನ್ ಲೋಕೇಶ್ ಸಹ ಪ್ರಾಣಿಗಳನ್ನು ದತ್ತು ಸ್ವೀಕಾರ ಮಾಡಿದ್ದರು.
ಇತ್ತೀಚಿಗಷ್ಟೆ 'ನಟ ಸಾರ್ವಭೌಮ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಚಿಕ್ಕಣ್ಣ ಅದರ ನಂತರ ಮತ್ತಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.