Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ಬರಹಗಾರ ನಿರ್ದೇಶಕ ನಂಜುಂಡ ನಿಧನ
ಕನ್ನಡದ ಖ್ಯಾತ ಬರಹಗಾರ, ನಿರ್ದೇಶಕ ನಂಜುಂಡ ಕೃಷ್ಣ ಅವರು ಮಂಗಳವಾರ ನಿಧನರಾಗಿದ್ದಾರೆ. 52 ವರ್ಷದ ನಂಜುಂಡ ಅವರು ಡಯಾಬಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಎರಡು ವಾರದ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬಹುಅಂಗಾಂಗ ವೈಫಲ್ಯದಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸುಮಾರು 30 ವರ್ಷಗಳಿಂದ ಚಿತ್ರರಂಗದಲ್ಲಿದ್ದ ಇವರು ಪತ್ನಿ ಮತ್ತು ಪತ್ರಿಯನ್ನ ಬಿಟ್ಟು ಅಗಲಿದ್ದಾರೆ.
ರಾಯಚೂರು ವಿದ್ಯಾರ್ಥಿನಿ ಸಾವು: ಹೃದಯಸ್ಪರ್ಶಿ ಪತ್ರ ಬರೆದ ಯೋಗರಾಜ್ ಭಟ್
ಪ್ರಕಾಶ್ ರೈ ನಾಯಕನಾಗಿ ನಟಿಸಿದ್ದ 'ಮನಸಲೂ ನೀನೆ ಕನಸಲೂ ನೀನೆ' ಹಾಗೂ ರಾಜೇಶ್ ಕೃಷ್ಣನ್ ನಾಯಕನಾಗಿ ಕಾಣಿಸಿಕೊಂಡಿದ್ದ 'ಮೆಲೋಡಿ' ಚಿತ್ರಗಳನ್ನ ನಂಜುಂಡ ಅವರು ನಿರ್ದೇಶನ ಮಾಡಿದ್ದರು.
ನಿರ್ದೇಶನಕ್ಕಿಂತ ಹೆಚ್ಚು ಚಿತ್ರಕಥೆ ಮತ್ತು ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ ಖ್ಯಾತಿಯೂ ಇವರಿಗೆ ಸಲ್ಲುತ್ತೆ.
ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು
ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ನಂಜುಂಡ, ಕೆ ವಿ ರಾಜು ಅವರ ಶಿಷ್ಯ. ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಬದುಕಿಗೆ ಆಯ್ಕೆ ಮಾಡಿಕೊಂಡಿದ್ದು ಸಿನಿಮಾ ಕ್ಷೇತ್ರವನ್ನು. ಬಡ ಟೈಲರ್ ಒಬ್ಬನ ಮಗನಾಗಿದ್ದ ನಂಜುಂಡ ಬಹಳ ಕಷ್ಟಪಟ್ಟು ಬಂದವರು.