Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ಬರಹಗಾರ ನಿರ್ದೇಶಕ ನಂಜುಂಡ ನಿಧನ
ಕನ್ನಡದ ಖ್ಯಾತ ಬರಹಗಾರ, ನಿರ್ದೇಶಕ ನಂಜುಂಡ ಕೃಷ್ಣ ಅವರು ಮಂಗಳವಾರ ನಿಧನರಾಗಿದ್ದಾರೆ. 52 ವರ್ಷದ ನಂಜುಂಡ ಅವರು ಡಯಾಬಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಎರಡು ವಾರದ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬಹುಅಂಗಾಂಗ ವೈಫಲ್ಯದಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸುಮಾರು 30 ವರ್ಷಗಳಿಂದ ಚಿತ್ರರಂಗದಲ್ಲಿದ್ದ ಇವರು ಪತ್ನಿ ಮತ್ತು ಪತ್ರಿಯನ್ನ ಬಿಟ್ಟು ಅಗಲಿದ್ದಾರೆ.
ರಾಯಚೂರು ವಿದ್ಯಾರ್ಥಿನಿ ಸಾವು: ಹೃದಯಸ್ಪರ್ಶಿ ಪತ್ರ ಬರೆದ ಯೋಗರಾಜ್ ಭಟ್
ಪ್ರಕಾಶ್ ರೈ ನಾಯಕನಾಗಿ ನಟಿಸಿದ್ದ 'ಮನಸಲೂ ನೀನೆ ಕನಸಲೂ ನೀನೆ' ಹಾಗೂ ರಾಜೇಶ್ ಕೃಷ್ಣನ್ ನಾಯಕನಾಗಿ ಕಾಣಿಸಿಕೊಂಡಿದ್ದ 'ಮೆಲೋಡಿ' ಚಿತ್ರಗಳನ್ನ ನಂಜುಂಡ ಅವರು ನಿರ್ದೇಶನ ಮಾಡಿದ್ದರು.
ನಿರ್ದೇಶನಕ್ಕಿಂತ ಹೆಚ್ಚು ಚಿತ್ರಕಥೆ ಮತ್ತು ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ ಖ್ಯಾತಿಯೂ ಇವರಿಗೆ ಸಲ್ಲುತ್ತೆ.
ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು
ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ನಂಜುಂಡ, ಕೆ ವಿ ರಾಜು ಅವರ ಶಿಷ್ಯ. ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಬದುಕಿಗೆ ಆಯ್ಕೆ ಮಾಡಿಕೊಂಡಿದ್ದು ಸಿನಿಮಾ ಕ್ಷೇತ್ರವನ್ನು. ಬಡ ಟೈಲರ್ ಒಬ್ಬನ ಮಗನಾಗಿದ್ದ ನಂಜುಂಡ ಬಹಳ ಕಷ್ಟಪಟ್ಟು ಬಂದವರು.