twitter
    For Quick Alerts
    ALLOW NOTIFICATIONS  
    For Daily Alerts

    ಖ್ಯಾತ ಬರಹಗಾರ ನಿರ್ದೇಶಕ ನಂಜುಂಡ ನಿಧನ

    |

    ಕನ್ನಡದ ಖ್ಯಾತ ಬರಹಗಾರ, ನಿರ್ದೇಶಕ ನಂಜುಂಡ ಕೃಷ್ಣ ಅವರು ಮಂಗಳವಾರ ನಿಧನರಾಗಿದ್ದಾರೆ. 52 ವರ್ಷದ ನಂಜುಂಡ ಅವರು ಡಯಾಬಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಎರಡು ವಾರದ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಬಹುಅಂಗಾಂಗ ವೈಫಲ್ಯದಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸುಮಾರು 30 ವರ್ಷಗಳಿಂದ ಚಿತ್ರರಂಗದಲ್ಲಿದ್ದ ಇವರು ಪತ್ನಿ ಮತ್ತು ಪತ್ರಿಯನ್ನ ಬಿಟ್ಟು ಅಗಲಿದ್ದಾರೆ.

    ರಾಯಚೂರು ವಿದ್ಯಾರ್ಥಿನಿ ಸಾವು: ಹೃದಯಸ್ಪರ್ಶಿ ಪತ್ರ ಬರೆದ ಯೋಗರಾಜ್ ಭಟ್ರಾಯಚೂರು ವಿದ್ಯಾರ್ಥಿನಿ ಸಾವು: ಹೃದಯಸ್ಪರ್ಶಿ ಪತ್ರ ಬರೆದ ಯೋಗರಾಜ್ ಭಟ್

    ಪ್ರಕಾಶ್ ರೈ ನಾಯಕನಾಗಿ ನಟಿಸಿದ್ದ 'ಮನಸಲೂ ನೀನೆ ಕನಸಲೂ ನೀನೆ' ಹಾಗೂ ರಾಜೇಶ್ ಕೃಷ್ಣನ್ ನಾಯಕನಾಗಿ ಕಾಣಿಸಿಕೊಂಡಿದ್ದ 'ಮೆಲೋಡಿ' ಚಿತ್ರಗಳನ್ನ ನಂಜುಂಡ ಅವರು ನಿರ್ದೇಶನ ಮಾಡಿದ್ದರು.

    Kannada director nanjunda krishna is no more

    ನಿರ್ದೇಶನಕ್ಕಿಂತ ಹೆಚ್ಚು ಚಿತ್ರಕಥೆ ಮತ್ತು ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ ಖ್ಯಾತಿಯೂ ಇವರಿಗೆ ಸಲ್ಲುತ್ತೆ.

    ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು ಕಾರು ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಸಾವು

    ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ನಂಜುಂಡ, ಕೆ ವಿ ರಾಜು ಅವರ ಶಿಷ್ಯ. ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಬದುಕಿಗೆ ಆಯ್ಕೆ ಮಾಡಿಕೊಂಡಿದ್ದು ಸಿನಿಮಾ ಕ್ಷೇತ್ರವನ್ನು. ಬಡ ಟೈಲರ್ ಒಬ್ಬನ ಮಗನಾಗಿದ್ದ ನಂಜುಂಡ ಬಹಳ ಕಷ್ಟಪಟ್ಟು ಬಂದವರು.

    English summary
    Kannada director nanjunda krishna is no more. he was directed by kanasalu neene manasalu neene and melody movies.
    Wednesday, April 24, 2019, 19:45
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X