Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೈ' ಹಿಡಿದು ರಾಜಕೀಯ ಪ್ರವೇಶಿಸಿದ 'ಚೆಲುವಿನ ಚಿತ್ತಾರ'ದ ನಿರ್ದೇಶಕ ಎಸ್ ನಾರಾಯಣ್
ರಾಜಕೀಯಕ್ಕೂ ಚಿತ್ರರಂಗಕ್ಕೂ ಬಿಡಿಸಲಾರದ ಹಳೆ ನಂಟಿದೆ. ಸಿನಿಮಾ ಮಂದಿ ರಾಜಕೀಯದಲ್ಲೂ, ರಾಜಕೀಯ ಮುಖಂಡರು ಸಿನಿಮಾದಲ್ಲೂ ಕಾಣಿಸಿಕೊಳ್ಳುವುದು ಹೊಸ ವಿಷಯವೇನಲ್ಲ. ಈಗಾಗಲೇ ಕನ್ನಡ ಚಿತ್ರರಂಗದ ನಟ-ನಟಿಯರು ರಾಜಕೀಯ ಪಕ್ಷಗಳಲ್ಲಿ ತಮ್ಮ ಹೆಸರನ್ನು ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಸ್ಯಾಂಡ್ವುಡ್ನ ಹಿರಿಯ ನಿರ್ದೇಶಕ ಎಸ್. ನಾರಾಯಣ್ ಕೂಡ ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದಾರೆ.
Recommended Video
ಇಂದು(ಮಾರ್ಚ್ 16) 'ಚೆಲುವಿನ ಚಿತ್ತಾರ'ದ ನಿರ್ದೇಶಕ ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರೊಂದಿಗೆ ಪಕ್ಷ ಸೇರಿದ್ದಾರೆ. ಈ ಮೂಲಕ ಅಧಿಕೃತವಾಗಿ ಎಸ್ ನಾರಾಯಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಂತಾಗಿದೆ.
ಕನ್ನಡ ಚಿತ್ರರಂಗದಲ್ಲಿ ಸುಮಾರು 40 ವರ್ಷಗಳಿಂದ ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ ಎಸ್ ನಾರಾಯಣ್ ಗುರುತಿಸಿಕೊಂಡಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಶಿಸ್ತಿನ ನಿರ್ದೇಶಕ ಎಂದೇ ಖ್ಯಾತಿ ಗಳಿಸಿರುವ ಎಸ್ ನಾರಾಯಣ್ 'ಚೈತ್ರದ ಪ್ರೇಮಾಂಜಲಿ', 'ಸೂರ್ಯವಂಶ', 'ಚೆಲುವಿನ ಚಿತ್ತಾರ'ದಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಯಶಸ್ಸು ಗಳಿಸಿರುವ ಎಸ್ ನಾರಾಯಣ್ ರಾಜಕೀಯದಲ್ಲೂ ಯಶಸ್ಸು ಕಾಣುತ್ತಾರಾ? ಅನ್ನುವ ಕುತೂಹಲವಿದೆ.