Don't Miss!
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಖ್ಯಾತ ಗಾಯಕ ರಘುದೀಕ್ಷಿತ್ ದಂಪತಿ
Recommended Video
ಖ್ಯಾತ ಗಾಯಕ ರಘುದೀಕ್ಷಿತ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ರಘುದೀಕ್ಷಿತ್ ಮತ್ತು ಪತ್ನಿ ಮಯೂರಿ ಉಪಾಧ್ಯಾಯ ಸಂಸಾರದಲ್ಲಿ ಬಿರುಕು ಮೂಡಿದ್ದು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಳೆದ ಒಂದು ವರ್ಷದಿಂದ ರಘುದೀಕ್ಷಿತ್ ದಂಪತಿ ಬೇರ ಬೇರೆ ವಾಸಿಸುತ್ತಿದ್ದರು. ಆದ್ರೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಶುಕ್ರವಾರ ನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದ ರಘುದೀಕ್ಷಿತ್ ದಂಪತಿ, ಯಾವುದೆ ಆರೋಪ ಪ್ರತ್ಯಾರೋಪ ಮಾಡದೆ ಪರಸ್ಪರ ಒಪ್ಪಿಗೆಯ ಮೇರೆಗೆ ಹಿಂದೂ ವಿವಾಹ ಕಾಯಿದೆ ಸೆಕ್ಷನ್ 13B(1) ರ ಅಡಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಈಗ ಗುಪ್ತಚರ ಅಧಿಕಾರಿ
6 ತಿಂಗಳುಗಳಕಾಲ ಸಮಯಾವಕಾಶ ನೀಡಿರುವ ಕೋರ್ಟ್, ಡಿಸೆಂಬರ್ 9ಕ್ಕೆ ಅರ್ಜಿ ವಿಚಾರಣೆಗೆ ಮುಂದೂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ರಘುದೀಕ್ಷಿತ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗಿ, ಮಲಯಾಳಂ, ತಮಿಳು ಸಿನಿಮಾಗಳಿಗೆ ಗಾಯಕರಾಗಿ, ಸಂಗೀತ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ.
ಇನ್ನು ಪತ್ನಿ ಮಯೂರಿ ಉಪಾಧ್ಯಾಯ ಕೂಡ ಖ್ಯಾತ ಶಾಸ್ತ್ರೀಯ ನೃತ್ಯ ಕಲಾವಿದೆ. ಅವರು ಕೂಡ ದೇಶ ವಿದೇಶಗಳಲ್ಲಿ ನೃತ್ಯ ಶೋಗಳನ್ನು ನೀಡಿದ್ದಾರೆ. ಇನ್ನು ರಘುದೀಕ್ಷಿತ್ ವಿರುದ್ಧ ತಮಿಳು ಗಾಯಕಿ ಚಿನ್ಮಯಿ ಶ್ರೀ ಪಾದ್ ಮಿ ಟೂ ಆರೋಪ ಮಾಡಿದ್ದರು. ಅವರ ಅರೋಪವನ್ನು ರಘು ಒಪ್ಪಿಕೊಂಡು ಕ್ಷಮೆ ಕೂಡ ಕೇಳಿದ್ದರು.