Don't Miss!
- News Actress Harshika Poonacha: ಪ್ರಹ್ಲಾದ್ ಜೋಶಿ ಭೇಟಿಯಾಗಿ ಧನ್ಯವಾದ ತಿಳಿಸಿದ ನಟಿ ಹರ್ಷಿಕಾ ದಂಪತಿ: ಸಚಿವರ ಅಭಯ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಖ್ಯಾತ ಗಾಯಕ ರಘುದೀಕ್ಷಿತ್ ದಂಪತಿ
Recommended Video
ಖ್ಯಾತ ಗಾಯಕ ರಘುದೀಕ್ಷಿತ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ರಘುದೀಕ್ಷಿತ್ ಮತ್ತು ಪತ್ನಿ ಮಯೂರಿ ಉಪಾಧ್ಯಾಯ ಸಂಸಾರದಲ್ಲಿ ಬಿರುಕು ಮೂಡಿದ್ದು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಳೆದ ಒಂದು ವರ್ಷದಿಂದ ರಘುದೀಕ್ಷಿತ್ ದಂಪತಿ ಬೇರ ಬೇರೆ ವಾಸಿಸುತ್ತಿದ್ದರು. ಆದ್ರೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಶುಕ್ರವಾರ ನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದ ರಘುದೀಕ್ಷಿತ್ ದಂಪತಿ, ಯಾವುದೆ ಆರೋಪ ಪ್ರತ್ಯಾರೋಪ ಮಾಡದೆ ಪರಸ್ಪರ ಒಪ್ಪಿಗೆಯ ಮೇರೆಗೆ ಹಿಂದೂ ವಿವಾಹ ಕಾಯಿದೆ ಸೆಕ್ಷನ್ 13B(1) ರ ಅಡಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಈಗ ಗುಪ್ತಚರ ಅಧಿಕಾರಿ
6 ತಿಂಗಳುಗಳಕಾಲ ಸಮಯಾವಕಾಶ ನೀಡಿರುವ ಕೋರ್ಟ್, ಡಿಸೆಂಬರ್ 9ಕ್ಕೆ ಅರ್ಜಿ ವಿಚಾರಣೆಗೆ ಮುಂದೂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ರಘುದೀಕ್ಷಿತ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗಿ, ಮಲಯಾಳಂ, ತಮಿಳು ಸಿನಿಮಾಗಳಿಗೆ ಗಾಯಕರಾಗಿ, ಸಂಗೀತ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ.
ಇನ್ನು ಪತ್ನಿ ಮಯೂರಿ ಉಪಾಧ್ಯಾಯ ಕೂಡ ಖ್ಯಾತ ಶಾಸ್ತ್ರೀಯ ನೃತ್ಯ ಕಲಾವಿದೆ. ಅವರು ಕೂಡ ದೇಶ ವಿದೇಶಗಳಲ್ಲಿ ನೃತ್ಯ ಶೋಗಳನ್ನು ನೀಡಿದ್ದಾರೆ. ಇನ್ನು ರಘುದೀಕ್ಷಿತ್ ವಿರುದ್ಧ ತಮಿಳು ಗಾಯಕಿ ಚಿನ್ಮಯಿ ಶ್ರೀ ಪಾದ್ ಮಿ ಟೂ ಆರೋಪ ಮಾಡಿದ್ದರು. ಅವರ ಅರೋಪವನ್ನು ರಘು ಒಪ್ಪಿಕೊಂಡು ಕ್ಷಮೆ ಕೂಡ ಕೇಳಿದ್ದರು.