Don't Miss!
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Lifestyle
ಫೆಬ್ರವರಿ 2023: ಈ ಮಾಸದಲ್ಲಿರುವ ಪ್ರಮುಖ ಹಬ್ಬಗಳು ಹಾಗೂ ವ್ರತಗಳ ಪಟ್ಟಿ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸೆಪ್ಟೆಂಬರ್ 28ಕ್ಕೆ ವೀರಪ್ಪನ್ ಅಟ್ಟಹಾಸ ಬಿಡುಗಡೆ
ನರಹಂತಕ, ದಂತಚೋರ ವೀರಪ್ಪನ್ ನಡೆಸಿದ ಅಡವಿ ಜೀವನ, ವರನಟ ದಿವಂಗತ ಡಾ.ರಾಜ್ ಕುಮಾರ್ ಕಿಡ್ನಾಪ್ನ ಯಥಾವತ್ ಘಟನೆಗಳ ಆಧಾರವಾಗಿ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆ. ಇದು ದ್ವಿಭಾಷಾ ಚಿತ್ರವಾಗಿದ್ದು ಕನ್ನಡದಲ್ಲಿ 'ಅಟ್ಟಹಾಸ' ಎಂದು ಹೆಸರಿಟ್ಟಿದ್ದರೆ ತಮಿಳಿನಲ್ಲಿ 'ವನ ಯುದ್ಧಂ' ಎಂದು ಇಡಲಾಗಿದೆ.
ಎರಡು ಭಾಷೆಯ ಚಿತ್ರಗಳನ್ನು ಒಟ್ಟಿಗೆ ಬಿಡುಗಡೆ ಮಾಡಲು ರಮೇಶ್ ಮುಂದಾಗಿದ್ದಾರೆ. ಆದರೆ ತಮಿಳು ಆವೃತ್ತಿಯ ಬಗ್ಗೆ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಆಕ್ಷೇಪಾರ್ಹ ಸನ್ನಿವೇಶಗಳಿದ್ದು ನನ್ನ ಹಾಗೂ ನನ್ನ ಮಗಳ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಾಧ್ಯತೆಗಳಿವೆ ಎಂದು ಆರೋಪಿಸಿದ್ದರು.
ಈ ಸಂಬಂಧ ಅವರು ಕೋರ್ಟ್ ಮೆಟ್ಟಿಲೇರಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ಕೋರಿದ್ದರು. ತಮ್ಮ ಬಳಿ ಸಾಕ್ಷಾಧಾರಗಳಿದ್ದರೆ ತೋರಿಸಿ ಎಂದು ಕೋರ್ಟ್ ಹೇಳಿತ್ತು. ಬಿಡುಗಡೆಗೂ ಮುನ್ನ ವಿಶೇಷ ಚಿತ್ರಪ್ರದರ್ಶನ ಏರ್ಪಾಡಿಸಿ ಮುತ್ತುಲಕ್ಷ್ಮಿ ಅವರನ್ನು ರಮೇಶ್ ಆಹ್ವಾನಿಸಿದ್ದರು. ಆದರೆ ಮುತ್ತುಲಕ್ಷ್ಮಿ ಅವರು ಕಾರಣಾಂತರಗಳಿಂದ ಚಿತ್ರಪ್ರದರ್ಶನಕ್ಕೆ ಬರಲಿಲ್ಲ.
ಈಗ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದ್ದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ರಮೇಶ್ ತಿಳಿಸಿದ್ದಾರೆ. ಈ ಸಂಬಂಧ ಅವರು ತಮಿಳು ಪತ್ರಿಕೆಗಳಲ್ಲೂ ಚಿತ್ರ ಬಿಡುಗಡೆ ಬಗ್ಗೆ ಜಾಹೀರಾತು ನೀಡಿದ್ದಾರೆ. ಕೊನೆ ಕ್ಷಣದಲ್ಲಿ ಮುತ್ತುಲಕ್ಷ್ಮಿ ಏನು ಮಾಡುತ್ತಾರೋ ಮತ್ತೆ ಚಿತ್ರ ಬಿಡುಗಡೆ ಮುಂದಕ್ಕೆ ಹೋಗುತ್ತದೋ ಏನೋ ಕಾದುನೋಡೋಣ. (ಏಜೆನ್ಸೀಸ್)