Just In
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Automobiles
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆಪ್ಟೆಂಬರ್ 28ಕ್ಕೆ ವೀರಪ್ಪನ್ ಅಟ್ಟಹಾಸ ಬಿಡುಗಡೆ
ನರಹಂತಕ, ದಂತಚೋರ ವೀರಪ್ಪನ್ ನಡೆಸಿದ ಅಡವಿ ಜೀವನ, ವರನಟ ದಿವಂಗತ ಡಾ.ರಾಜ್ ಕುಮಾರ್ ಕಿಡ್ನಾಪ್ನ ಯಥಾವತ್ ಘಟನೆಗಳ ಆಧಾರವಾಗಿ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆ. ಇದು ದ್ವಿಭಾಷಾ ಚಿತ್ರವಾಗಿದ್ದು ಕನ್ನಡದಲ್ಲಿ 'ಅಟ್ಟಹಾಸ' ಎಂದು ಹೆಸರಿಟ್ಟಿದ್ದರೆ ತಮಿಳಿನಲ್ಲಿ 'ವನ ಯುದ್ಧಂ' ಎಂದು ಇಡಲಾಗಿದೆ.
ಎರಡು ಭಾಷೆಯ ಚಿತ್ರಗಳನ್ನು ಒಟ್ಟಿಗೆ ಬಿಡುಗಡೆ ಮಾಡಲು ರಮೇಶ್ ಮುಂದಾಗಿದ್ದಾರೆ. ಆದರೆ ತಮಿಳು ಆವೃತ್ತಿಯ ಬಗ್ಗೆ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಆಕ್ಷೇಪಾರ್ಹ ಸನ್ನಿವೇಶಗಳಿದ್ದು ನನ್ನ ಹಾಗೂ ನನ್ನ ಮಗಳ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಾಧ್ಯತೆಗಳಿವೆ ಎಂದು ಆರೋಪಿಸಿದ್ದರು.
ಈ ಸಂಬಂಧ ಅವರು ಕೋರ್ಟ್ ಮೆಟ್ಟಿಲೇರಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ಕೋರಿದ್ದರು. ತಮ್ಮ ಬಳಿ ಸಾಕ್ಷಾಧಾರಗಳಿದ್ದರೆ ತೋರಿಸಿ ಎಂದು ಕೋರ್ಟ್ ಹೇಳಿತ್ತು. ಬಿಡುಗಡೆಗೂ ಮುನ್ನ ವಿಶೇಷ ಚಿತ್ರಪ್ರದರ್ಶನ ಏರ್ಪಾಡಿಸಿ ಮುತ್ತುಲಕ್ಷ್ಮಿ ಅವರನ್ನು ರಮೇಶ್ ಆಹ್ವಾನಿಸಿದ್ದರು. ಆದರೆ ಮುತ್ತುಲಕ್ಷ್ಮಿ ಅವರು ಕಾರಣಾಂತರಗಳಿಂದ ಚಿತ್ರಪ್ರದರ್ಶನಕ್ಕೆ ಬರಲಿಲ್ಲ.
ಈಗ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದ್ದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ರಮೇಶ್ ತಿಳಿಸಿದ್ದಾರೆ. ಈ ಸಂಬಂಧ ಅವರು ತಮಿಳು ಪತ್ರಿಕೆಗಳಲ್ಲೂ ಚಿತ್ರ ಬಿಡುಗಡೆ ಬಗ್ಗೆ ಜಾಹೀರಾತು ನೀಡಿದ್ದಾರೆ. ಕೊನೆ ಕ್ಷಣದಲ್ಲಿ ಮುತ್ತುಲಕ್ಷ್ಮಿ ಏನು ಮಾಡುತ್ತಾರೋ ಮತ್ತೆ ಚಿತ್ರ ಬಿಡುಗಡೆ ಮುಂದಕ್ಕೆ ಹೋಗುತ್ತದೋ ಏನೋ ಕಾದುನೋಡೋಣ. (ಏಜೆನ್ಸೀಸ್)