Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯೂಯಾರ್ಕ್ ಭಾರತೀಯ ಸಿನಿಮೋತ್ಸವದಲ್ಲಿ 'ಬಳೆಕೆಂಪ' ಸ್ಪರ್ಧೆ
'ತಿಥಿ' ಸಿನಿಮಾ ಮಾಡಿ, ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡು, ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ಕಥೆಗಾರ ಈರೇಗೌಡ ಇದೀಗ 'ಬಳೆಕೆಂಪ' ಎಂಬ ಚಿತ್ರಕ್ಕೆ ನಿರ್ದೇಶನ ಮಾಡಿರುವುದು ನಿಮಗೆಲ್ಲ ಗೊತ್ತೇ ಇದೆ.
ಸ್ಪೇನ್ ನಲ್ಲಿ ನಡೆದ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ 2018 ಸೇರಿದಂತೆ ಹಲವು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ಪ್ರಶಸ್ತಿ ಪಡೆದುಕೊಂಡಿರುವ 'ಬಳೆಕೆಂಪ' ಚಿತ್ರ ಇದೀಗ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಗೆ 'ಅತ್ಯುತ್ತಮ ಚಿತ್ರ' ಹಾಗೂ 'ಅತ್ಯುತ್ತಮ ನಿರ್ದೇಶಕ' ವಿಭಾಗದಲ್ಲಿ ನಾಮಿನೇಟ್ ಆಗಿದೆ.
ತಾವು ಆಕ್ಷನ್ ಕಟ್ ಹೇಳಿರುವ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಸಿಗುತ್ತಿರುವುದಕ್ಕೆ ಈರೇಗೌಡ ಸಂತಸಗೊಂಡಿದ್ದಾರೆ.
ಸ್ಪರ್ಧೆಗೆ ನಿಂತ ತಿಥಿ ಈರೇ ಗೌಡರ 'ಬಳೆಕೆಂಪ'
ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ನಲ್ಲಿ 'ಬಳೆಕೆಂಪ' ಚಿತ್ರದ ಮೇ 9 ರಂದು ಪ್ರದರ್ಶನಗೊಳ್ಳಲಿದೆ. ಹೀಗಾಗಿ, ಮೇ 7 ರಂದೇ ನ್ಯೂಯಾರ್ಕ್ ಗೆ ಈರೇಗೌಡ ಪ್ರಯಾಣ ಬೆಳೆಸಲಿದ್ದಾರೆ.
ಅಂದ್ಹಾಗೆ, 'ಬಳೆಕೆಂಪ' ಬಳೆಗಾರನ ಸುತ್ತ ನಡೆಯುವ ಕಥೆ. 'ಬಳೆಕೆಂಪ' ಚಿತ್ರದಲ್ಲಿ ಜ್ಞಾನೇಶ್, ಭಾಗ್ಯಶ್ರೀ, ಚಂದ್ರಶೇಖರ್.ಸಿ.ಎಸ್ ಮತ್ತು ನಾಗರಾಜು.ಬಿ ತಾರಾಗಣದಲ್ಲಿ ಇದ್ದಾರೆ.