Don't Miss!
- News ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರಿ ವಿವಾದದಲ್ಲಿ ಉಪೇಂದ್ರ 'ಬಸವಣ್ಣ' ಪೋಸ್ಟರ್
ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸಲಿರುವ 'ಬಸವಣ್ಣ' ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಚಿತ್ರದ ಪೋಸ್ಟರ್ ಭಾರಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದ ಶೀರ್ಷಿಕೆಯೇನೋ 'ಬಸವಣ್ಣ' ಎಂದಿದೆ. ಆದರೆ ಅದೇ ಶೀರ್ಷಿಕೆ ಜೊತೆ ಗನ್ ಸಹ ಇರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಬಸವಣ್ಣ ಚಿತ್ರವನ್ನು ನಿರ್ದೇಶಿಸುತ್ತಿರುವವರು ದಂಡುಪಾಳ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಶ್ರೀನಿವಾಸರಾಜು. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಫಸ್ಟ್ ಲುಕ್ ಬಸವ ಜಯಂತಿ (ಮೇ.13) ದಿನವೇ ಬಿಡುಗಡೆಯಾಗಿರುವುದು ಇನ್ನಷ್ಟು ಅನುಮಾನಗಳಿಗೆ ಎಡೆಮಾಡಿದೆ.
ಆದರೆ ಚಿತ್ರದ ಶೀರ್ಷಿಕೆಯನ್ನು 'ಬಸವಣ್ಣ' ಎಂದಿಟ್ಟಿದ್ದರೆ ಯಾವುದೇ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಧ್ಯಾನಸ್ಥ ಮುದ್ರೆ, ರುದ್ರಾಕ್ಷಿ, ವಿಭೂತಿಯನ್ನೂ ತೋರಿಸಲಾಗಿದ್ದು ಇವೆಲ್ಲವೂ ಬಸವಣ್ಣನವರ ಭಕ್ತಿಭಾವಗಳನ್ನು ಪ್ರತಿನಿಧಿಸುವಂತಿವೆಯಲ್ಲಾ ಎಂದರೆ....
ಶ್ರೀನಿವಾಸರಾಜು ಹೇಳುವುದೇನೆಂದರೆ...ಇದು ಕೇವಲ ಫಸ್ಟ್ ಲುಕ್ ಅಷ್ಟೇ. ಇದನ್ನು ನೋಡಿ ಬಸವಣ್ಣನವರಿಗೆ ಸಂಬಂಧ ಕಲ್ಪಿಸುವುದು ಸರಿಯಲ್ಲ. ಚಿತ್ರ ಬಿಡುಗಡೆ ಆದ ಮೇಲೆ ವಿವಾದಿತ ಸನ್ನಿವೇಶಗಳಿದ್ದರೆ ಆಗ ಮಾತನಾಡಿ. ಈಗಲೇ ಚಿತ್ರಕಥೆ ಬಗ್ಗೆ ಮಾತನಾಡುವುದು ಬೇಡ ಎಂದಿದ್ದಾರೆ.
ಚಿತ್ರದಲ್ಲಿ ಗನ್ ಇದ್ದ ಮಾತ್ರಕ್ಕೆ ಯಾಕೆ ತಪ್ಪಾಗಿ ಕಾಣಬೇಕು. ಫಸ್ಟ್ ಲುಕ್ ನೋಡಿ ಜಡ್ಜ್ ಮಾಡಬೇಡಿ. ಚಿತ್ರ ರಿಲೀಸ್ ಆಗಲಿ. ಆಗ ವಿವಾದಾತ್ಮಕ ಅನ್ನಿಸಿದರೆ ಆಗ ಮಾತನಾಡೋಣ ಎಂದಿದ್ದಾರೆ. ಶಿವ, ಗಣೇಶ, ಕೃಷ್ಣ ಎಂದಿಟ್ಟು ಅಲ್ಲೂ ಗನ್ ಮಚ್ಚು ಲಾಂಗು ಕೊಡಲ್ಲವೇ? ಹಾಗಂತ ಆ ಚಿತ್ರಗಳೆಲ್ಲವನ್ನೂ ತಪ್ಪು ಎಂದು ಹೇಳಕ್ಕಾಗುತ್ತದೆಯೇ ಎಂಬುದು ಶ್ರೀನಿವಾಸರಾಜು ಅವರ ವಿವರಣೆ.