Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ನಾಟಕ ಬಂದ್: ಸಿನಿಮಾ ಪ್ರದರ್ಶನವಿಲ್ಲ, ಶೂಟಿಂಗ್ ಸ್ಥಗಿತ
ಜನವರಿ 25 ರಂದು ಕರೆ ನೀಡಲಾಗಿರುವ 'ಕರ್ನಾಟಕ ಬಂದ್'ಗೆ ಸಂಬಂಧಪಟ್ಟಂತೆ ನಾಳೆ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದ್ದು, ಚಿತ್ರೋಧ್ಯಮ ಬಂದ್ ಮಾಡುತ್ತಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಗೆಯವರೆಗೂ ಚಿತ್ರರಂಗದ ಯಾವುದೇ ಚಟುವಟಿಕೆಗಳು, ಸಿನಿಮಾ ಶೂಟಿಂಗ್ ಹಾಗೂ ಸಿನಿಮಾ ಪ್ರದರ್ಶನವಿರುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಷ್ಟನೆ ನೀಡಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದ್ ಮತ್ತು ಉಪಾಧ್ಯಕ್ಷ ಉಮೇಶ್ ಬಣಕಾರ್ ಈಗಾಗಲೇ ಮಾಧ್ಯಮಗಳಿಗೆ ಈ ಬಗ್ಗೆ ಖಚಿತಪಡಿಸಿದ್ದಾರೆ.
ಮಹದಾಯಿಗಾಗಿ ಕರ್ನಾಟಕ ಬಂದ್, ಏನಿರುತ್ತೆ? ಏನಿರಲ್ಲ?
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಈ ಬಂದ್ ಮಾಡುತ್ತಿದ್ದು, ರೈತರ ಪರವಾಗಿ ಕನ್ನಡ ಸಿನಿಮಾರಂಗ ನಿಂತಿದೆ. ಬೆಳಿಗ್ಗೆ ಮೆಜೆಸ್ಟಿಕ್ ನಲ್ಲಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ರ್ಯಾಲಿಯಲ್ಲಿ ಸಿನಿಮಾ ಕಲಾವಿದರು, ತಂತ್ರಜ್ಞರು ಕೂಡ ಭಾಗಿಯಾಗುವ ಸಾಧ್ಯತೆ ಇದೆ.
ಇನ್ನು 'ಬುಕ್ ಮೈ ಶೋ' ಸೇರಿದಂತೆ ಆನ್ ಲೈನ್ ನಲ್ಲಿ ನಾಳೆಗೆ ಟಿಕೆಟ್ ಬುಕ್ಕಿಂಗ್ ಓಪನ್ ಇದೆ. ಬೆಳಿಗ್ಗೆಯಿಂದ ಸಂಜೆಯ ತನಕ ಪ್ರದರ್ಶನವಿರುವುದಿಲ್ಲ ಎಂದು ವಾಣಿಜ್ಯ ಮಂಡಳಿ ತಿಳಿಸಿದೆ. ಹೀಗಾಗಿ, ಟಿಕೆಟ್ ಬುಕ್ ಮಾಡುವುದಕ್ಕು ಮುಂಚೆ ಸರಿಯಾಗಿ ಯೋಚನೆ ಮಾಡಿ ಬುಕ್ ಮಾಡಿ.