Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ಗೆ ನಾರಾಯಣ್
ಜೆಡಿಎಸ್ ಮೂಲಗಳಿಂದ ಬಂದ ಮಾಹಿತಿ ಪ್ರಕಾರ ಅವರು ಸೆ.28ರಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಎಸ್ ನಾರಾಯಣ್ ಅವರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಬೆಂಗಳೂರಿನಲ್ಲೇ ನಡೆಯಲಿದೆ. 2013ರ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿನೆಮಾ ತಾರೆಗಳು ಒಬ್ಬೊಬ್ಬರಾಗಿ ರಾಜಕೀಯ ಕ್ಷೇತ್ರಕ್ಕೆ ಧುಮುಕುತ್ತಿರುವುದು ಗಾಂಧಿನಗರದಲ್ಲಿ ಚರ್ಚನೀಯ ವಿಷಯವಾಗಿದೆ.
"ಅದು ರಾಜಕೀಯವೇ ಇರಲಿ, ಸಿನೆಮಾ ಕ್ಷೇತ್ರವೇ ಇರಲಿ ನನ್ನ ತನವನ್ನು ನಾನು ಬಿಟ್ಟುಕೊಡಲ್ಲ. ನಾನು ಯಾವುದನ್ನೂ ಸುತ್ತಿ ಬಳಸಿ ಹೇಳುವ ಪೈಕಿಯಲ್ಲ. ಎಲ್ಲವನ್ನೂ ನೇರ ನಿಷ್ಠುರವಾಗಿ ಹೇಳುತ್ತೇನೆ. ಚಿತ್ರೋದ್ಯಮದಲ್ಲಿರುವ ಎಲ್ಲರಿಗೂ ಇದು ಗೊತ್ತು. ರಾಜಕೀಯದಲ್ಲೂ ಅಷ್ಟೇ ಇದೇ ರೀತಿ ಇರುತ್ತೇನೆ" ಎಂದಿದ್ದರು ನಾರಾಯಣ್.
ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರಿಗೂ ಎಸ್ ನಾರಾಯಣ್ ಅವರಿಗೂ ಮೊದಲಿನಿಂದಲೂ ಒಡನಾಟವಿತ್ತು. ಕುಮಾರಸ್ವಾಮಿ ಅವರ ಬ್ಯಾನರ್ ನಲ್ಲಿ ಬಂದಂತಹ ಹಲವಾರು ಚಿತ್ರಗಳನ್ನು ನಾರಾಯಣ್ ನಿರ್ದೇಶಿಸಿದ್ದಾರೆ. ಅವುಗಳಲ್ಲಿ 'ಸೂರ್ಯವಂಶ', 'ಗಲಾಟೆ ಅಳಿಯಂದಿರು', 'ಚಂದ್ರಚಕೋರಿ' ಪ್ರಮುಖವಾದವು.
ನಾರಾಯಣ್ ನಿರ್ದೇಶಿಸಿರುವ ಲೇಟೆಸ್ಟ್ ಚಿತ್ರ 'ಅಪ್ಪಯ್ಯ' ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೆ ಕನ್ನಡ ಚಿತ್ರರಂಗದ ತಾರೆಗಳಾದ ಪೂಜಾಗಾಂಧಿ, ಮಾಳವಿಕಾ ಅನಿನಾಶ್ ಅವರು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಕೈಹಿಡಿದ್ದಾರೆ. ತಾರೆ ರಕ್ಷಿತಾ ಅವರು ಶ್ರೀರಾಮುಲು ಅವರ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಜಾಡಿನಲ್ಲಿ ಈಗ ಕಲಾ ಸಾಮ್ರಾಟ್ ಹೆಜ್ಜೆ ಹಾಕುತ್ತಿರುವುದು ವಿಶೇಷ. (ಒನ್ ಇಂಡಿಯಾ ಕನ್ನಡ)