Don't Miss!
- Technology ಹಾನರ್ನಿಂದ ಹೊಸ ಬ್ಲೂಟೂತ್ ಸ್ಪೀಕರ್ ಲಾಂಚ್: ಬೆಲೆ ಎಷ್ಟು?
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸ್ತಿನಾಪುರದ ಯಜಮಾನನನ್ನು ಭೇಟಿ ಮಾಡಿದ ಸಿಂಪಲ್ ಸುನಿ
Recommended Video
ಕನ್ನಡ ಸಿನಿಮಾರಂಗದಲ್ಲಿ ಹಸ್ತಿನಾಪುರದ ಯಜಮಾನ ಅಂದರೆ ಸದ್ಯ ನೆನಪಾಗುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಹೌದು, ದರ್ಶನ್ ಕುರುಕ್ಷೇತ್ರ ಹಾಗೂ 'ಯಜಮಾನ' ಚಿತ್ರದಲ್ಲಿ ಅಭಿನಯ ಮಾಡುತ್ತಿರುವುದರಿಂದ ಎರಡು ಚಿತ್ರದ ಪಾತ್ರಗಳ ಹೆಸರನ್ನು ಸೇರಿಸಿ ನಿರ್ದೇಶಕ ಸಿಂಪಲ್ ಸುನಿ ಹೀಗೆಂದು ದರ್ಶನ್ ಅವರನ್ನು ಕರೆದಿದ್ದಾರೆ.
ಸಿಂಪಲ್ ಸುನಿ ಇತ್ತೀಚೆಗಷ್ಟೆ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಒಬ್ಬ ನಿರ್ದೇಶಕ ಒಬ್ಬ ಸ್ಟಾರ್ ಅನ್ನು ಭೇಟಿ ಮಾಡಿದ್ರೆ ಒಟ್ಟಿಗೆ ಸಿನಿಮಾ ಮಾಡುತ್ತಾರಾ ? ಎನ್ನುವ ಆಲೋಚನೆಗಳು ತಲೆಯಲ್ಲಿ ಬರುತ್ತೆ. ಆದರೆ, ಸಿಂಪಲ್ ಸುನಿ ಚಾಲೆಂಜಿಂಗ್ ಸ್ಟಾರ್ ಅನ್ನು ಭೇಟಿ ಮಾಡಿರುವ ವಿಚಾರವೇ ಬೇರೆ.
ಮೊನ್ನೆ ಟ್ರೆಂಡಿಂಗ್, ಇವತ್ತು ಮಿಲಿಯನ್: ಇದು ದರ್ಶನ್ ಸಿನಿಮಾ
ಸುನಿ ನಿರ್ದೇಶನದ 'ಬಜಾರ್' ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದಲ್ಲಿ ಅಭಿನಯ ಮಾಡಿರುವ ನಾಯಕ ನಟ ಧನ್ವೀರ್ ಚಾಲೆಂಜಿಂಗ್ ಸ್ಟಾರ್ ಅವರ ಅಪ್ಪಟ ಅಭಿಮಾನಿ. ಹಾಗಾಗಿ ಇಬ್ಬರು ಹೋಗಿ ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.
ಸದ್ಯ 'ಬಜಾರ್' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಹಾಡುಗಳ ಬಿಡುಗಡೆಗೆ ತಯಾರಿ ನಡೆದಿದೆ. ಸಾಕಷ್ಟು ಹೊಸ ಕಲಾವಿದರಿಗೆ ಸಹಾಯ ಮಾಡುತ್ತಾ ಬಂದಿರುವ ಚಾಲೆಂಜಿಂಗ್ ಸ್ಟಾರ್ ಧನ್ವೀರ್ ಅಭಿನಯದ ಮಾಡಿರುವ 'ಬಜಾರ್' ಚಿತ್ರದ ಆಡಿಯೋ ರಿಲೀಸ್ ಮಾಡಿಕೊಟ್ಟರು ಅನುಮಾನವಿಲ್ಲ.