Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸ್ತಿನಾಪುರದ ಯಜಮಾನನನ್ನು ಭೇಟಿ ಮಾಡಿದ ಸಿಂಪಲ್ ಸುನಿ
Recommended Video
ಕನ್ನಡ ಸಿನಿಮಾರಂಗದಲ್ಲಿ ಹಸ್ತಿನಾಪುರದ ಯಜಮಾನ ಅಂದರೆ ಸದ್ಯ ನೆನಪಾಗುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಹೌದು, ದರ್ಶನ್ ಕುರುಕ್ಷೇತ್ರ ಹಾಗೂ 'ಯಜಮಾನ' ಚಿತ್ರದಲ್ಲಿ ಅಭಿನಯ ಮಾಡುತ್ತಿರುವುದರಿಂದ ಎರಡು ಚಿತ್ರದ ಪಾತ್ರಗಳ ಹೆಸರನ್ನು ಸೇರಿಸಿ ನಿರ್ದೇಶಕ ಸಿಂಪಲ್ ಸುನಿ ಹೀಗೆಂದು ದರ್ಶನ್ ಅವರನ್ನು ಕರೆದಿದ್ದಾರೆ.
ಸಿಂಪಲ್ ಸುನಿ ಇತ್ತೀಚೆಗಷ್ಟೆ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಒಬ್ಬ ನಿರ್ದೇಶಕ ಒಬ್ಬ ಸ್ಟಾರ್ ಅನ್ನು ಭೇಟಿ ಮಾಡಿದ್ರೆ ಒಟ್ಟಿಗೆ ಸಿನಿಮಾ ಮಾಡುತ್ತಾರಾ ? ಎನ್ನುವ ಆಲೋಚನೆಗಳು ತಲೆಯಲ್ಲಿ ಬರುತ್ತೆ. ಆದರೆ, ಸಿಂಪಲ್ ಸುನಿ ಚಾಲೆಂಜಿಂಗ್ ಸ್ಟಾರ್ ಅನ್ನು ಭೇಟಿ ಮಾಡಿರುವ ವಿಚಾರವೇ ಬೇರೆ.
ಮೊನ್ನೆ ಟ್ರೆಂಡಿಂಗ್, ಇವತ್ತು ಮಿಲಿಯನ್: ಇದು ದರ್ಶನ್ ಸಿನಿಮಾ
ಸುನಿ ನಿರ್ದೇಶನದ 'ಬಜಾರ್' ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದಲ್ಲಿ ಅಭಿನಯ ಮಾಡಿರುವ ನಾಯಕ ನಟ ಧನ್ವೀರ್ ಚಾಲೆಂಜಿಂಗ್ ಸ್ಟಾರ್ ಅವರ ಅಪ್ಪಟ ಅಭಿಮಾನಿ. ಹಾಗಾಗಿ ಇಬ್ಬರು ಹೋಗಿ ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.
ಸದ್ಯ 'ಬಜಾರ್' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಹಾಡುಗಳ ಬಿಡುಗಡೆಗೆ ತಯಾರಿ ನಡೆದಿದೆ. ಸಾಕಷ್ಟು ಹೊಸ ಕಲಾವಿದರಿಗೆ ಸಹಾಯ ಮಾಡುತ್ತಾ ಬಂದಿರುವ ಚಾಲೆಂಜಿಂಗ್ ಸ್ಟಾರ್ ಧನ್ವೀರ್ ಅಭಿನಯದ ಮಾಡಿರುವ 'ಬಜಾರ್' ಚಿತ್ರದ ಆಡಿಯೋ ರಿಲೀಸ್ ಮಾಡಿಕೊಟ್ಟರು ಅನುಮಾನವಿಲ್ಲ.