Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂವಿಲ್ಯಾಂಡ್ ಥಿಯೇಟರ್ ಬಳಿ ವಿತರಕನ ಕೊಲೆ
ಕನ್ನಡ ಚಿತ್ರೋದ್ಯಮದ ವಾಣಿಜ್ಯ ಕೇಂದ್ರ ಗಾಂಧಿನಗರ ಚಲನಚಿತ್ರ ವಿತರಕರೊಬ್ಬರ ಕೊಲೆಯೊಂದಕ್ಕೆ ಸಾಕ್ಷಿಯಾಗಿದೆ. ಮೂವಿಲ್ಯಾಂಡ್ ಚಿತ್ರಮಂದಿರದ ಮುಂಭಾಗದಲ್ಲೇ ಚಲನಚಿತ್ರ ವಿತರಕ ಹಾಗೂ ಪ್ರದರ್ಶಕ ಹನುಮಂತ ಕಟ್ಟಿಮನಿ (35) ಹೆಣವಾಗಿದ್ದಾರೆ.
ಉತ್ತರ ಕರ್ನಾಟಕ ಮೂಲದವರಾದ ಕಟ್ಟಿಮನಿ ಅವರು ಕೆಲ ವರ್ಷಗಳ ಹಿಂದೆ ಗಾಂಧಿನಗರಕ್ಕೆ ಅಡಿಯಿಟ್ಟಿದ್ದರು. ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಿಗರಾಗಿದ್ದ ಅವರು ಚಲನಚಿತ್ರ ಕಾರ್ಮಿಕರ ಪರ್ಯಾಯ ಒಕ್ಕೂಟಕ್ಕೆ ಹೋರಾಡಿದ್ದರು.
ಅದೇ ಬಿಲ್ಡಿಂಗ್ ನ ಬಾಡಿಗೆದಾರ ಚಂದ್ರು ಎಂಬುವವರು ಕಟ್ಟಿಮನಿ ಅವರ ರೂಮಿನ ಬಾಗಿಲು ಓಪನ್ ಮಾಡಿದಾಗ ಅವರು ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಅವರ ಕುತ್ತಿಗೆಗೆ ವೈರ್ ನಿಂದ ಬಿಗಿದು ಕೊಲೆ ಮಾಡಲಾಗಿತ್ತು. ಶನಿವಾರ (ಏ.5) ಈ ಕೊಲೆ ಪ್ರಕರಣ ಬಯಲಿಗೆ ಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಟ್ಟಿಮನಿ ವಾಸವಾಗಿದ್ದ ಅಕ್ಕಪಕ್ಕದ ರೂಮಿನವರು ರಾತ್ರಿ 7ಕ್ಕೆ ಕೆಲಸಕ್ಕೆ ಹೋದರೆ ಬರುವುದು ಬೆಳಗ್ಗೆ 11 ಗಂಟೆಗೆ. ಬಹುಶಃ ಕೊಲೆಗಾರರಿಗೆ ಈ ಮಾಹಿತಿಯೂ ಇತ್ತು ಎನ್ನಿಸುತ್ತದೆ. ಕನ್ನಡದ ಛತ್ರಪತಿ ಚಿತ್ರ ಸೇರಿದಂತೆ ಹಲವು ಚಿತ್ರಗಳಿಗೆ ಅವರು ವಿತರಕರಾಗಿ ಕೆಲಸ ಮಾಡಿದ್ದಾರೆ.