Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರೇಕ್ ನಿರೀಕ್ಷೆಯಲ್ಲಿ ಆದಿತ್ಯ; ರಾಜ್ಯೋತ್ಸವಕ್ಕೆ ಎದೆಗಾರಿಕೆ
ಸುಮನಾ ಕಿತ್ತೂರು ಅವರು ನಿರ್ದೇಶಕಿಯಾಗಿ ಈಗಾಗಲೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ. ಅವರ ನಿರ್ದೇಶನದ 'ಸ್ಲಂ ಬಾಲ' ಹಾಗೂ 'ಕಳ್ಳರ ಸಂತೆ' ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಈಗವರು ಕಾದಂಬರಿ ಆಧಾರಿತ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಚಿತ್ರದ ಹೆಸರು 'ಎದೆಗಾರಿಕೆ'.
ಭೂಗತ ಜಗತ್ತಿನ ಕಥಾಹಂದರವನ್ನು 'ಎದೆಗಾರಿಕೆ' ಒಳಗೊಂಡಿದ್ದು, ಸುಪಾರಿ ಕಿಲ್ಲರ್ ಒಬ್ಬನ ಸುತ್ತ ಕತೆ ಸುತ್ತುತ್ತದೆ. ಇದೊಂದು ಭೂಗತ ಕಥಾಹಂದರದ ಕಾದಂಬರಿಯಾದರೂ ಅಗ್ನಿ ಶ್ರೀಧರ್ ಅವರ ಬರವಣಿಗೆ ಶೈಲಿ ಹೆಜ್ಜೆಹೆಜ್ಜೆಗೂ ಕುತೂಹಲ ಮೂಡಿಸುವಂತಿದೆ.
ಸುಮನಾ ಕಿತ್ತೂರು ನಿರ್ದೇಶನದ ಈ ಚಿತ್ರಕ್ಕೆ ಅಗ್ನಿಶ್ರಿಧರ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಬಿ.ರಾಕೇಶ್ ಛಾಯಾಗ್ರಹಣ, ದೀಪಕ್ ಪಂಡಿತ್ ಸಂಗೀತ ನೀಡಿದ್ದಾರೆ. ಬೆಂಗಳೂರು, ಮುಂಬೈ, ಸಕಲೇಶಪುರ, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಮೊದಲು ಈ ಚಿತ್ರಕ್ಕೆ ಭಾವನಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರು ಕಾರಣಾಂತರಗಳಿಂದ ಈ ಚಿತ್ರದಿಂದ ಹಿಂದೆ ಸರಿದರು. ತೆರವಾಗಿದ್ದ ಭಾವನಾ ಸ್ಥಾನಕ್ಕೆ 'ಒಲವೇ ಮಂದಾರ' ಖ್ಯಾತಿಯ ಆಕಾಂಕ್ಷಾ ಬಂದಿದ್ದಾರೆ.
ಆದಿತ್ಯ ನಾಯಕ ನಟನಾಗಿರುವ ಈ ಚಿತ್ರದ ಉಳಿದ ತಾರಾಬಳಗದಲ್ಲಿ ಅತುಲ್ ಕುಲಕರ್ಣಿ, ಅಚ್ಯುತಕುಮಾರ್, ಸೃಜನ್ ಲೋಕೇಶ್, ಧರ್ಮ, ಶರತ್ ಲೋಹಿತಾಶ್ವ, ಮೇಘನಾ ಮುಂತಾದವರಿದ್ದಾರೆ.
ಆದಿತ್ಯ ಈ ಚಿತ್ರದ ಮೂಲಕ ಬ್ರೇಕ್ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೆ ಚಿತ್ರದ ಪೋಸ್ಟರ್ ಗಳು ಹಾಗೂ ಸ್ಟಿಲ್ಸ್ ಆಕರ್ಷವಾಗಿದ್ದು ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ಕುತೂಲಹ ಮೂಡಿಸಿದೆ. ಚಿತ್ರದ ಟ್ರೇಲರ್ ಸಹ ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡಿದೆ. (ಒನ್ಇಂಡಿಯಾ ಕನ್ನಡ)