Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೈಜ ಘಟನೆಗಳ ಆಧಾರಿತ ಚಿತ್ರ 'ಗಾಂಧೀಜಿ ಕನಸು'
ನವಭಾರತ ನಿರ್ಮಾಣಕ್ಕಾಗಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು ಹಲವಾರು ಕನಸುಗಳನ್ನು ಕಂಡಿದ್ದರು. ಶುಚಿತ್ವ ಶೌಚಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಅವರು ಕಂಡ ಪ್ರಮುಖ ಕನಸಾಗಿತ್ತು. ಆ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ಚಲನಚಿತ್ರವೊಂದು ನಿರ್ಮಾಣವಾಗಿದೆ.
ಈ ಹಿಂದೆ 7-8 ಚಿತ್ರಗಳಲ್ಲಿ ಅಭಿನಯಿಸಿರುವ ರಮೇಶ್.ಎಸ್.ಪರವಿ ನಾಯ್ಕರ್ ನಿರ್ಮಾಣದ ಜೊತೆ ನಿರ್ದೇಶನ ಮಾಡಿರುವ ಗಾಂಧೀಜಿ ಕನಸು ಚಿತ್ರವೀಗ ಬಿಡುಗಡೆಗೆ ಸಿದ್ಧವಾಗಿದೆ. ಗಾಂಧೀಜಿಯವರ ಚಳವಳಿ ಕಾಲದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆದಂಥ ನೈಜ ಘಟನೆಗಳನ್ನು ಈ ಚಿತ್ರಕ್ಕೆ ಕಥಾ ವಸ್ತುವನ್ನಾಗಿ ಬಳಸಿಕೊಳ್ಳಲಾಗಿದೆ. ['ನವರಂಗಿ' ತಾರೆ ರೂಪಿಕಾ ಪಂಚರಂಗಿ ಚಿತ್ರಗಳು]
ಚಿತ್ರದಲ್ಲಿ ಸಚಿವರುಗಳಾದ ಎಸ್.ಆರ್.ಪಾಟೀಲ್, ಹೆಚ್.ಕೆ.ಪಾಟೀಲ್ ಹಾಗೂ ಮಾಜಿ ಸಚಿವ ಆರ್.ವಿ.ತಿಮ್ಮಾಪುರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಎಸ್.ರಮೇಶ್, ರೂಪಿಕಾ, ಎಂ.ಎನ್.ಲಕ್ಷ್ಮೀದೇವಿ, ಬ್ಯಾಂಕ್ ಜನಾರ್ಧನ್, ಎಂ.ಎಸ್.ಉಮೇಶ್, ಹೊನ್ನವಳ್ಳಿ ಕೃಷ್ಣ, ಮೂಗ್ ಸುರೇಶ್, ರೇಖಾದಾಸ್, ಗುರುರಾಜ ಹೊಸಕೋಟೆ ತಾರಾಗಣವಿದೆ.
ಈ ಚಿತ್ರಕ್ಕೆ ಆರ್.ಗಿರಿಯವರ ಛಾಯಾಗ್ರಹಣ, ಗುರುರಾಜ್ ಹೊಸಕೋಟೆ ಸಂಗೀತ, ಮದನ್ ಹರಿಣಿ ನೃತ್ಯ ನಿರ್ದೇಶನ ಮನು ಸಂಭಾಷಣೆ, ಕೆ.ಈಶ್ವರ್ ಸಂಕಲನ, ಎಸ್.ರಮೇಶ್ ಕಥೆ, ಚಿತ್ರಕಥೆ ರಚಿಸಿದ್ದಾರೆ. (ಒನ್ಇಂಡಿಯಾ ಕನ್ನಡ)