Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು ಬ್ಯಾಂಕ್ ವೃತ್ತದಲ್ಲಿ ತಾರೆ ಜಮೀನ್ ಪರ್
ಡಬ್ಬಿಂಗ್ ವಿರುದ್ಧ ಕನ್ನಡ ಸಿನಿಮಾ ತಾರೆಗಳು ಭೂಮಿಗಿಳಿಯುವ ಸಮಯ ಮತ್ತೆ ಬಂದಿದೆ. ಸೋಮವಾರ (ಜ.27) ಹಮ್ಮಿಕೊಂಡಿರುವ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಯ ಕಾವು ರಾಜ್ಯದಾದ್ಯಂತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಿಂದ ಸೆಂಟ್ರಲ್ ಕಾಲೇಜು ಕ್ರಿಕೆಟ್ ಮೈದಾನಕ್ಕೆ ಬೃಹತ್ ಮೆರವಣಿಗೆ ಸಾಗಲಿದೆ.
ಈ ಬಂದ್ ಗೆ ಚಲನಚಿತ್ರ, ಕಿರುತೆರೆ ನಟ ನಟಿಯರು, ತಂತ್ರಜ್ಞರು, ಕಾರ್ಮಿಕರು, ನಿರ್ದೇಶಕರು, ಕನ್ನಡಪರ ಹೋರಾಟಗಾರರು ಹಾಗೂ ಇಡೀ ಚಿತ್ರೋದ್ಯಮ ಭಾಗಿಯಾಗಿದೆ. ಆದರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಿಂದ ಈ ಬಂದ್ ಗೆ ತಟಸ್ಥ ಧೋರಣೆ ವ್ಯಕ್ತವಾಗಿದೆ.
ನಟ ಜಗ್ಗೇಶ್, ರವಿಚಂದ್ರನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಸಾ.ರಾ.ಗೋವಿಂದು, ಭಾರತಿ ವಿಷ್ಣುವರ್ಧನ್, ಪೂಜಾಗಾಂಧಿ, ಕನ್ನಡ ಚಲನಚಿತ್ರ ಕಾರ್ಮಿಕರ ಒಕ್ಕುಟದ ಅಧ್ಯಕ್ಷ ಅಶೋಕ್, ಶ್ರೀನಾಥ್, ಶಶಿಕುಮಾರ್, ಶರಣ್, ಯಶ್, ಸುಧಾರಾಣಿ, ಶ್ರುತಿ, ಹೇಮಾ ಚೌಧರಿ ಬಂದ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. (ಏಜೆನ್ಸೀಸ್)