Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿ 25 ಕ್ಕೆ ಕನ್ನಡ ಚಿತ್ರರಂಗ ಬಂದ್
ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಜನವರಿ 25 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷ ಬಂದ್ ನಲ್ಲಿ ಭಾಗಿ ಆಗಲಿವೆ.
ಸದಾ ರೈತರ ಪರವಾಗಿ ನಿಲ್ಲುವ ಕನ್ನಡ ಸಿನಿಮಾರಂಗ ಕೂಡ ಕರ್ನಾಟಕ ಬಂದ್ ನಲ್ಲಿ ಕೈ ಜೋಡಿಸಲಿದೆ. ಇದೇ ಕಾರಣದಿಂದಾಗಿ ಜ 25 ಚಿತ್ರರಂಗ ಬಂದ್ ಆಗಲಿದೆ. ಕರ್ನಾಟಕ ಬಂದ್ ಆದಮೇಲೆ ಚಿತ್ರರಂಗವೂ ಬಂದ್ ಆಗಲಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ತಿಳಿಸಿದ್ದಾರೆ.
ಜನವರಿ 25ರಂದು ಸಿನಿಮಾ ತಾರೆಯರು ಕೂಡ ರಸ್ತೆಗಿಳಿದು ಹೋರಾಟ ಮಾಡುವ ಸಾಧ್ಯತೆಗಳು ಹೆಚ್ಚಾಗಿದೆ. ಸಿನಿಮಾ ಸ್ಟಾರ್ ಗಳು ಹೋರಾಟದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಆರೋಪಗಳನ್ನ ತಳ್ಳಿ ಹಾಕಿರುವ ಸಿನಿಮಾ ತಾರೆಯರು ಈ ಬಾರಿ ನರಗುಂದಕ್ಕೂ ಬಂದು ಪ್ರತಿಭಟನೆ ಮಾಡುವುದಾಗಿ ಈ ಹಿಂದೆಯೇ ತಿಳಿಸಿದ್ದರು.
ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಮಾತು ಕತೆಗಳು ನಡೆಯುತ್ತಿದ್ದು ಜನವರಿ ೨೫ರಂದೇ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರು ಬೆಂಗಳೂರಿನಲ್ಲೇ ಹೋರಾಟ ಮಾಡುತ್ತಾರಾ ಅಥವಾ ಒಂದು ದಿನಾಂಕ ನಿಗಧಿ ಮಾಡಿಕೊಂಡು ನರಗುಂದದಲ್ಲಿ ರ್ಯಾಲಿ ಮಾಡುತ್ತಾರಾ ಅನ್ನುವುದು ಇನ್ನ ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.
ಒಟ್ಟಾರೆ ಪ್ರತಿ ಬಾರಿಯಂತೆ ಈ ಸಲವೂ ರೈತರ ಹೋರಾಟಕ್ಕೆ ಕನ್ನಡ ಸಿನಿಮಾ ತಾರೆಯರು ಹಾಗೂ ಇಡೀ ಚಿತ್ರರಂಗ ಕೈ ಜೋಡಿಸಲಿದೆ.