Don't Miss!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿ 25 ಕ್ಕೆ ಕನ್ನಡ ಚಿತ್ರರಂಗ ಬಂದ್
ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಜನವರಿ 25 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷ ಬಂದ್ ನಲ್ಲಿ ಭಾಗಿ ಆಗಲಿವೆ.
ಸದಾ ರೈತರ ಪರವಾಗಿ ನಿಲ್ಲುವ ಕನ್ನಡ ಸಿನಿಮಾರಂಗ ಕೂಡ ಕರ್ನಾಟಕ ಬಂದ್ ನಲ್ಲಿ ಕೈ ಜೋಡಿಸಲಿದೆ. ಇದೇ ಕಾರಣದಿಂದಾಗಿ ಜ 25 ಚಿತ್ರರಂಗ ಬಂದ್ ಆಗಲಿದೆ. ಕರ್ನಾಟಕ ಬಂದ್ ಆದಮೇಲೆ ಚಿತ್ರರಂಗವೂ ಬಂದ್ ಆಗಲಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ತಿಳಿಸಿದ್ದಾರೆ.
ಜನವರಿ 25ರಂದು ಸಿನಿಮಾ ತಾರೆಯರು ಕೂಡ ರಸ್ತೆಗಿಳಿದು ಹೋರಾಟ ಮಾಡುವ ಸಾಧ್ಯತೆಗಳು ಹೆಚ್ಚಾಗಿದೆ. ಸಿನಿಮಾ ಸ್ಟಾರ್ ಗಳು ಹೋರಾಟದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಆರೋಪಗಳನ್ನ ತಳ್ಳಿ ಹಾಕಿರುವ ಸಿನಿಮಾ ತಾರೆಯರು ಈ ಬಾರಿ ನರಗುಂದಕ್ಕೂ ಬಂದು ಪ್ರತಿಭಟನೆ ಮಾಡುವುದಾಗಿ ಈ ಹಿಂದೆಯೇ ತಿಳಿಸಿದ್ದರು.
ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಮಾತು ಕತೆಗಳು ನಡೆಯುತ್ತಿದ್ದು ಜನವರಿ ೨೫ರಂದೇ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರು ಬೆಂಗಳೂರಿನಲ್ಲೇ ಹೋರಾಟ ಮಾಡುತ್ತಾರಾ ಅಥವಾ ಒಂದು ದಿನಾಂಕ ನಿಗಧಿ ಮಾಡಿಕೊಂಡು ನರಗುಂದದಲ್ಲಿ ರ್ಯಾಲಿ ಮಾಡುತ್ತಾರಾ ಅನ್ನುವುದು ಇನ್ನ ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.
ಒಟ್ಟಾರೆ ಪ್ರತಿ ಬಾರಿಯಂತೆ ಈ ಸಲವೂ ರೈತರ ಹೋರಾಟಕ್ಕೆ ಕನ್ನಡ ಸಿನಿಮಾ ತಾರೆಯರು ಹಾಗೂ ಇಡೀ ಚಿತ್ರರಂಗ ಕೈ ಜೋಡಿಸಲಿದೆ.