Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಮೇಶ್ 'ರೆಡ್ಡಿ' ಟೈಟಲ್ ವಿವಾದ ಸುಖಾಂತ್ಯ
ಒಂದು ಕಡೆ ಸೈಕೋ ಜೈ ಶಂಕರ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಂಡು ಮತ್ತೆ ಸಿಕ್ಕಿಬಿದ್ದಿದ್ದಾನೆ. ಇತ್ತ ಸ್ಯಾಂಡಲ್ ವುಡ್ ನಲ್ಲಿ ಮತ್ತೊಬ್ಬ ಸೈಕೋ ಕುರಿತ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರಕ್ಕೆ ಆರಂಭದಿಂದಲೂ ಸಾಕಷ್ಟು ಎಡರುತೊಡರುಗಳು ಬರುತ್ತಲೇ ಇವೆ.
ಈ ಹಿಂದೆ ಚಿತ್ರಕ್ಕೆ 'ಉಮೇಶ್ ರೆಡ್ಡಿ' ಎಂಬ ಹೆಸರಿನಲ್ಲೇ ಚಿತ್ರವನ್ನು ತರಲು ಯೋಜಿಸಲಾಗಿತ್ತು. ಆದರೆ ಆ ಟೈಟಲ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅನುಮತಿ ನೀಡದ ಕಾರಣ 'ಉಮೇಶ್' ಎಂಬ ಶೀರ್ಷಿಕೆಯಲ್ಲಿ ಚಿತ್ರ ಸಿದ್ಧವಾಯಿತು.
ಈಗ ನ್ಯಾಯಾಲಯ ಕ್ರಾಸ್ ಮಾಡಿರುವ 'ರೆಡ್ಡಿ' ಎಂಬ ಪದ ಬಳಕೆಯನ್ನು ಕೈಬಿಡುವಂತೆ ಆದೇಶಿಸಿದೆ. ಈಗ ಚಿತ್ರದ ವಿವಾದ ಸುಖಾಂತ್ಯವಾಗಿದ್ದು ಶೀಘ್ರದಲ್ಲೇ ತೆರೆಗೆ ಅಪ್ಪಳಿಸುತ್ತಿದೆ. ಈ ಚಿತ್ರವನ್ನು ನಿರ್ಮಿಸಿ ನಿರ್ದೇಶಿಸುತ್ತಿರುವವರು ಅಶೋಕ್. ಜೋಯ್ ಸಿಮನ್ ಅವರ ಪುತ್ರ ಜಿತೇಂದ್ರ ಮುಖ್ಯ ಪಾತ್ರವನ್ನು ಪೋಷಿಸಿದ್ದಾರೆ.
ಇಷ್ಟಕ್ಕೂ ಚಿತ್ರದ ಕತೆ ಏನೆಂದರೆ. ವಿದೇಶಿ ವಿಶ್ವವಿದ್ಯಾಲಯದಲ್ಲಿ ಬಿಹೇವಿಯರಲ್ ಸೈನ್ಸ್ ಓದುತ್ತಿರುವ ವಿದ್ಯಾರ್ಥಿನಿಯರು ಭಾರತಕ್ಕೆ ಬರುತ್ತಾರೆ.
ಅರೆಸ್ಟ್ ಆಗಿರುವ ಸೈಕೋಪಾತ್ 'ಉಮೇಶ್'ನನ್ನು ಸಂದರ್ಶನ ಮಾಡಲು ಹೋಗುತ್ತಾರೆ. ಉಮೇಶ್ಗೆ ಅವರಿಬ್ಬರ ಮೇಲೆ ಕಣ್ಣುಬೀಳುತ್ತದೆ. ಜೈಲಿನಿಂದ ಎಸ್ಕೇಪ್ ಆಗುವ ಆತ ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸುತ್ತಾನೆ. ಮುಂದೇನಾಗುತ್ತದೆ ಎಂಬುದೇ ಚಿತ್ರದ ಕತೆ.
ಉಮೇಶ್ ರೆಡ್ಡಿ ಕತೆಯನ್ನು ಯಥಾವತ್ತಾಗಿ ತರದೆ ಅಲ್ಲಲ್ಲಿ ಸಿನಿಮೀಯ ಬದಲಾವಣೆಗಳು ಇರುತ್ತವೆ. ನೈಜವಾಗಿ ಉಮೇಶ್ ರೆಡ್ಡಿ ಪೊಲೀಸ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇಲ್ಲಿನ 'ಉಮೇಶ್'ನನ್ನು ಒಬ್ಬ ಚಲನಚಿತ್ರ ನಿರ್ದೇಶಕನಾಗಿ ತೋರಿಸಲಾಗಿದೆಯಂತೆ. ಚಿತ್ರದಲ್ಲಿ ಬಹುತೇಕ ಹೊಸಬರೇ ಇದ್ದಾರೆ.
ಚಿತ್ರದ ಪಾತ್ರವರ್ಗದಲ್ಲಿ ರವಿಕಾಳೆ, ರೂಪಿಕಾ, ಶರತ್ ಲೋಹಿತಾಶ್ವ, ಶೋಭಾ ರಾಘವೇಂದ್ರ ಮುಂತಾದರಿದ್ದಾರೆ. ಚಿತ್ರಕ್ಕೆ ಸಾಧು ಕೋಕಿಲ ಸಂಗೀತ, ಎಂಆರ್ ಸೀನು ಅವರ ಛಾಯಾಗ್ರಹಣ ಇದೆ. (ಏಜೆನ್ಸೀಸ್)