Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಾತರಗಿತ್ತಿ' ಗಿರಿನಗರ ಬೆಟ್ಟದ ಮೇಲೆ ಚಿತ್ರಣ
ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ.... ಇದು ದ ರಾ ಬೇಂದ್ರೆ ಅವರ ಜನಪ್ರಿಯ ಗೀತೆ. ನಿಲ್ಲೆ ನಿಲ್ಲೆ ಪತಂಗ.... ಸಹ 'ಎಡಕಲ್ಲು ಗುಡ್ಡದ ಮೇಲೆ' ಚಿತ್ರದ ಜನಪ್ರಿಯ ಗೀತೆ. ಆದರೆ ಚಿಟ್ಟೆಯಂತಹ ಮನಸ್ಸು? ಚಂಚಲತೆಯ ಪ್ರತಿರೂಪ ಎಂದು 'ಪಾತರಗಿತ್ತಿ' ಚಿತ್ರ 40 ಭಾಗದಷ್ಟು ಚಿತ್ರೀಕರಣ ಮುಗಿಸಿ ಒಂದು ಹಾಡನ್ನು ಗಿರಿನಗರದ ಬೆಟ್ಟದ ಮೇಲೆ ಹಾಕಲಾದ ಸೆಟ್ ಅಲ್ಲಿ ಚಿತ್ರೀಕರಣ ಮಾಡಲಾಗಿದೆ.
"ನೀನಂದ್ರೆ ಇಷ್ಟ ಕ್ಯಾಚ್ ಹಾಕೋಡು ಕಷ್ಟ" ಎಂಬುದು ಚಿತ್ರದ ಟ್ಯಾಗ್ ಲೈನ್. ಸಿನಿ ಸ್ಟಾಲ್ ಅವರ ಪ್ರಥಮ ಕಾಣಿಕೆ ಕೆ ಈಶ್ವರಪ್ಪ ಅವರು (ನಿರ್ದೇಶಕ ಕೆ ಈಶ್ವರ್) ನಿರ್ಮಾಪಕರು. ಮಂಜುನಾಥ್ ಈ ಚಿತ್ರದ ಸಹ ನಿರ್ಮಾಪಕರು. 'ಪಾತರಗಿತ್ತಿ' ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ನಿರ್ದೇಶನ ಕೆ ಈಶ್ವರ್ ಅವರದು.
'ಪಾತರಗಿತ್ತಿ' ಚಿತ್ರಕ್ಕೆ ಸಂಗೀತವನ್ನು ವೆಂಕಟಸ್ವಾಮಿ ಅವರು ಪೂರೈಸಿ ಚಿರನಿದ್ರೆಗೆ ಜಾರಿದರು. ಆದ ಕಾರಣ ಅವರ ಕೆಲಸವನ್ನು ಸಮೀರ ಕುಲಕರ್ಣಿ ಅವರು ಮಾಡಲಿದ್ದಾರೆ. ರಾಕೇಶ್ ಸಿ ತಿಲಕ್ ಈ ಚಿತ್ರದ ಛಾಯಾಗ್ರಾಹಕರು.
ನಾಯಕನಾಗಿ ಶ್ರೀಕಿ, ನಾಯಕಿ ಆಗಿ ಪ್ರಜು ಪೂವಯ್ಯ ಇದ್ದಾರೆ. ತಬಲಾ ನಾಣಿ, ಲಕ್ಕಿ ಶಂಕರ್, ರಾಜು ತಾಳಿಕೋಟೆ, ಲಯೇಂದ್ರ, ಮಿತ್ರ, ಬುಲ್ಲೆಟ್ ಪ್ರಕಾಶ್, ನಾಗರಾಜ್, ಬ್ರಹ್ಮಾವರ್, ಶಾಂತಮ್ಮ, ಚಿಕ್ಕಣ್ಣ, ಕುರಿ ಪ್ರತಾಪ್, ರಾಮನಯಕ್, ನೀಲಕಂಠಸ್ವಾಮಿ ಪೋಷಕ ಪಾತ್ರಗಳಲ್ಲಿ ಇದ್ದಾರೆ.
ಗಣೇಶ್ ಎಂ ಅವರ ಸಂಕಲನ, ಮದನ್ ಹರಿಣಿ, ಸದಾ ರಾಘವ್, ಮಾಲೂರ್ ಶ್ರೀನಿವಾಸ್ ಅವರ ನೃತ್ಯ ನಿರ್ದೇಶನ, ಮಾಸ್ ಮಾಧ ಅವರ ಸಾಹಸ, ಕೆ ವಿ ರಾವ್ ಅವರ ಕಲೆ ಈ ಚಿತ್ರಕ್ಕಿದೆ. (ಒನ್ಇಂಡಿಯಾ ಕನ್ನಡ)