Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಹೋದರರ ಸವಾಲ್' ಖ್ಯಾತಿ ಅಜಂತ ರಾಜು ವಿಧಿವಶ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಎ ಆರ್ ರಾಜು ಅವರು ಬುಧವಾರ (ನವೆಂಬರ್ 5) ಮುಂಜಾನೆ ವಿಧಿವಶರಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಅಜಂತ ರಾಜು ಎಂದೇ ಖ್ಯಾತರಾಗಿದ್ದ ಎ ಆರ್ ರಾಜು ಅವರು ಸರಿಸುಮಾರು 35ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ತಮ್ಮ ಹದಿನೆಂಟನೇ ವರ್ಷಕ್ಕೆ ಚಿತ್ರರಂಗಕ್ಕೆ ಅಡಿಯಿಟ್ಟ ರಾಜು ಅವರು ಸತತ ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಕಾರ್ಯನಿರತರಾದವರು. [ಎ ಆರ್ ರಾಜು ಯಾರು?]
ಅಜಂತ ಮೂವೀಸ್' ಲಾಂಛನದಲ್ಲಿ ರಾಜು ಅವರು ಸಾಹಸಸಿಂಹ ವಿಷ್ಣುವರ್ಧನ್ ಅವರೊಂದಿಗೆ 27 ಚಿತ್ರಗಳನ್ನು ನಿರ್ಮಿಸಿದ್ದಾರೆ. ವಿಷ್ಣುವರ್ಧನ್ ಅವರ ಮೊಟ್ಟ ಮೊದಲ ಡಬಲ್ ರೋಲ್ ಸಿನಿಮಾ 'ವಿಜಯ್ ವಿಕ್ರಮ್' ನಿರ್ಮಾಪಕರು ರಾಜು ಎಂಬುದು ವಿಶೇಷ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮೊದಲ ಕಲರ್ ಚಿತ್ರ 'ಸಹೋದರ ಸವಾಲ್' ನಿರ್ಮಿಸಿದ್ದೂ ಇದೇ ರಾಜು ಅವರು. ಆ ಚಿತ್ರದಲ್ಲಿ ರಜನಿಕಾಂತ್ ಅವರಿಗೆ ವಿಷ್ಣು ತಮ್ಮನಾಗಿ ಅಭಿನಯಿಸಿರುವುದು ಎಲ್ಲರಿಗೂ ಗೊತ್ತೇ ಇದೆ.
ಸದಾ ಕನ್ನಡ ಚಿತ್ರರಂಗ ಒಗ್ಗಟಾಗಿರಬೇಕೆಂದು ಬಯಸುತ್ತಿದ್ದ ರಾಜು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರು ಹರಿಸೋಣ. ವಿಜಯ್ ವಿಕ್ರಮ್, ಬೆಳ್ಳಿನಾಗ, ಭದ್ರಕಾಳಿ, ಸತಿ ಸಕ್ಕುಬಾಯಿ, ಸ್ನೇಹಿತರ ಸವಾಲ್, ಸಹೋದರರ ಸವಾಲ್, ಸಾಹಸ ಸಿಂಹ ಹೀಗೆ ಅವರು ನಿರ್ಮಿಸಿದ ಚಿತ್ರಗಳ ಪಟ್ಟಿ ಸಾಕಷ್ಟಿದೆ. (ಫಿಲ್ಮಿಬೀಟ್ ಕನ್ನಡ)