Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು ವಿವಿಯಿಂದ ಡಾಕ್ಟರೇಟ್ ಪಡೆದ 'ಅಯೋಗ್ಯ' ನಿರ್ಮಾಪಕ ಚಂದ್ರಶೇಖರ್
ಕನ್ನಡದ ಖ್ಯಾತ ನಿರ್ಮಾಪಕ ಟಿ ಆರ್ ಚಂದ್ರಶೇಖರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ರಾಜ್ಯಶಾಸ್ತ್ರ ವಿಭಾಗದಲ್ಲಿ ಪಿಹೆಚ್ಡಿ ಪದವಿ ಪಡೆದ ಚಂದ್ರಶೇಖರ್ ಅವರು ಮೈಸೂರು ವಿಶ್ವವಿದ್ಯಾಲಯದ 100ನೇ ವಾರ್ಷಿಕ ಘಟಿಕೋತ್ಸವ ಪದವಿ ಸ್ವೀಕರಿಸಿರು.
ಈ ಸಂತಸವನ್ನು ಸ್ವತಃ ಟಿಆರ್ ಚಂದ್ರಶೇಖರ್ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಪ್ರಧಾನಮಂತ್ರಿಗಳ ಉದ್ಘಾಟನೆಯ, ಹಾಗೂ ಘನತೆವೆತ್ತ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ತಾ.19.10.2020 ರಂದು ನಡೆದ, ಮೈಸೂರು ವಿಶ್ವವಿದ್ಯಾಲಯದ ಹೆಮ್ಮೆಯ 100ನೇ ವಾರ್ಷಿಕ ಘಟಿಕೋತ್ಸವ ದಲ್ಲಿ ನನ್ನ ವಿದ್ಯಾರ್ಥಿ ಜೀವನದ, ಬಹುನಿರೀಕ್ಷಿತ ಕನಸಿನ ರಾಜ್ಯಶಾಸ್ತ್ರ ವಿಭಾಗದಲ್ಲಿ, ಪಿಹೆಚ್_ಡಿ ಪದವಿಯನ್ನು ಪಡೆದ ಸಂಭ್ರಮದ ಕ್ಷಣ'' ಎಂದು ಖುಷಿಯಾಗಿದ್ದಾರೆ.
'ರಾಬರ್ಟ್' ಚಿತ್ರದ ಸಂಭಾಷಣೆಕಾರ ಈಗ ಸ್ಟಾರ್ ನಟನ ಚಿತ್ರಕ್ಕೆ ಡೈರೆಕ್ಟರ್
ಈ ಪೋಸ್ಟ್ ಜೊತೆಗೆ ಡಾಕ್ಟರೇಟ್ ಪಡೆಯುತ್ತಿರುವ ಫೋಟೋ, ಪದವಿ ಪ್ರಮಾಣಪತ್ರ, ಘಟಿಕೋತ್ಸವದಲ್ಲಿ ಭಾಗಿಯಾದ ಫೋಟೋ ಹಾಗೂ ಆಮಂತ್ರಣ ಪತ್ರಿಕೆಯ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.
ಟಿಆರ್ ಚಂದ್ರಶೇಖರ್ ಅವರು ಕನ್ನಡದಲ್ಲಿ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ ಹಾಗೂ ನಿರ್ಮಿಸುತ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಮಕ್ ಸಿನಿಮಾಗೆ ಬಂಡವಾಳ ಹಾಕಿದ್ದು ಇದೇ ಚಂದ್ರಶೇಖರ್.
Recommended Video
ಅದಾದ ಬಳಿಕ ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ನಟನೆಯ 'ಅಯೋಗ್ಯ' ಸಿನಿಮಾ ನಿರ್ಮಿಸಿದ್ದು ಇವರೇ. ಇದರ ಜೊತೆ 'ಬೀರ್ಬಲ್', 'ಗುಬ್ಬಿ ಮೇಲೆ ಬ್ರಹ್ಮಾಸ್ತ್ರ' ಸಿನಿಮಾ ಸಹ ಮಾಡಿದ್ದಾರೆ. ಉಪೇಂದ್ರ ನಟನೆಯ 'ಬುದ್ದಿವಂತ-2' ಚಿತ್ರಕ್ಕೂ ಇವರೇ ನಿರ್ಮಾಪಕರು. ಕೋಮಲ್ ಜೊತೆಯೂ ಒಂದು ಸಿನಿಮಾ ಮಾಡ್ತಿದ್ದಾರೆ.