ನೂತನ ಬಾಳಿಗೆ ಕಾಲಿಟ್ಟ 'ಮಾದೇಶ' ಚಿತ್ರದ ನಿರ್ಮಾಪಕ ಗೋವರ್ಧನ್

By Bharath Kumar

ಕಳೆದ ಮೂರು ವರ್ಷಗಳ ಹಿಂದೆ ಅತ್ಯಾಚಾರ, ಕೊಲೆ ಆರೋಪ ಹೊತ್ತು ಜೈಲು ಪಾಲಾಗಿದ್ದ ನಿರ್ಮಾಪಕ ಮತ್ತು ರಿಯಲ್‌ ಎಸ್ಟೇಟ್‌ ಉದ್ಯಮಿ ಗೋವರ್ಧನ್ ಮೂರ್ತಿ ಈಗ ಹೊಸ ಜೀವನ ಆರಂಭಿಸಿದ್ದಾರೆ. ತಮ್ಮ ಬದುಕಿನ ಕಹಿ ನೆನಪನ್ನ ಮರೆತು ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ.

ನಿರ್ಮಾಪಕ ಗೋವರ್ಧನ ಮೂರ್ತಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಮಂಜುಳಾ ಅವರ ವಿವಾಹ ದೇವಸ್ಥಾನವೊಂದರಲ್ಲಿ ಗುರುವಾರ ಸರಳವಾಗಿ ನಡೆಯಿತು. ನಂತರ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಲಾಯಿತು.

Kannada Film Producer Govardhan Murthy marriage

ಸಾರಿಗೆ ಸಚಿವ ಎಚ್. ಎಂ. ರೇವಣ್ಣ ಅವರ ಆಪ್ತ ಸಂಬಂಧಿಯಾದ ಮಂಜುಳಾ ಅವರು ಕಾಂಗ್ರೆಸ್ಸಿನಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಬಲ ನಾಯಕಿ ಎಂದೇ ಗುರುತಿಸಿಕೊಂಡಿದ್ದಾರೆ. ಇನ್ನು 'ಮಾದೇಶ' ಚಿತ್ರದ ನಿರ್ಮಾಪಕ ಗೋವರ್ಧನ್ ಮೂರ್ತಿ ಅವರು ಬೇಡದ ವಿಷಯಗಳಿಗೆ ಸುದ್ದಿಯಾಗಿದ್ದವರು.

ಶಿವರಾಜ್ ಕುಮಾರ್ ನಟನೆಯ 'ಮಾದೇಶ' ಚಿತ್ರದ ನಿರ್ಮಾಪಕ ಗೋವರ್ಧನ್ ಮೂರ್ತಿ ಅವರ ಮೇಲೆ ಸಹನಟ ವಿನೋದ್ ಎಂಬಾತನ ಮೇಲೆ ಗುಂಡು ಹಾರಿಸಿದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಕೊಚ್ಚಿಯಲ್ಲಿ ಬಂಧನಕ್ಕೊಳಗಾಗಿದ್ದರು. 2012ರಲ್ಲಿ ಈ ಕೇಸಿನಿಂದ ಖುಲಾಸೆಗೊಂಡರು.

ಇನ್ನೊಮ್ಮೆ ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರ ಮೂಲದ ಯುವತಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ನಗರ ಪೊಲೀಸರು ಬಂಧಿಸಿದ್ದರು. ಆದರೆ, ಆರೋಪ ನಿರಾಧಾರವಾಗಿದ್ದು ಎಂದು ಪರಿಗಣಿಸಿದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗೋವರ್ಧನ್ ಮೂರ್ತಿ ಅವರಿಗೆ ಶುಭ ಸುದ್ದಿ ಕೊಟ್ಟಿತ್ತು. ಇದಾದ ಬಳಿಕ, ಚಿತ್ರರಂಗದಿಂದ ದೂರವುಳಿದಿದ್ದ ಗೋವರ್ಧನ್ ಈಗ ಒಳ್ಳೆ ಸಮಾಚಾರದೊಂದಿಗೆ ಸುದ್ದಿಯಲ್ಲಿದ್ದಾರೆ.

More from Filmibeat

English summary
Kannada Film Producer Govardhan Murthy married c. Manjula a kin of Minister H.M Revanna opted for simple marriage function at a temple in Bengaluru. ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಮಂಜುಳಾ ಹಾಗೂ ಚಿತ್ರ ನಿರ್ಮಾಪಕ ಗೋವರ್ಧನ ಮೂರ್ತಿ ಅವರ ವಿವಾಹ ಸರಳವಾಗಿ ದೇವಸ್ಥಾನವೊಂದರಲ್ಲಿ ಗುರುವಾರ ನಡೆಯಿತು
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X