ಜೆಡಿಎಸ್ ನಿಂದ ಚುನಾವಣಾ ಕಣಕ್ಕೆ ನಿರ್ಮಾಪಕ ಕೆ.ಮಂಜು ?

By Naveen

ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧ ಇದೆ. ಅದು ಈ ಬಾರಿಯ ಚುನಾವಣೆಯಲ್ಲಿಯೂ ಮುಂದುವರೆದಿದ್ದು, ಚುನಾವಣಾ ಕಣಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಒಬ್ಬೊಬ್ಬರಾಗಿ ಕಾಲಿಡುತ್ತಿದ್ದಾರೆ. ಸದ್ಯ ಕನ್ನಡದ ನಿರ್ಮಾಪಕ ಕೆ.ಮಂಜು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಅವರು ಕಣಕ್ಕಿಳಿಯುವ ಸುದ್ದಿ ಬಂದಿದೆ. ಈ ಮುಂಚೆ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಇವರು ಈಗ ಜೆಡಿಎಸ್ ನಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಈಗ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯಿದೆ.

ಬೊಮ್ಮನಹಳ್ಳಿ ಕ್ಷೇತ್ರದಿಂದ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರಸ್ವಾಮೀಜಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಕೆ ಮಂಜುಗೆ ಅದೃಷ್ಟ ಒಲಿದಿದೆ. ಬೊಮ್ಮನಹಳ್ಳಿಯಲ್ಲಿ ಬಿಜೆಪಿಯಿಂದ ಸತೀಶ್ ರೆಡ್ಡಿ, ಕಾಂಗ್ರೆಸ್ ನಿಂದ ಪುಷ್ಪ ರಾಜಗೋಪಾಲರೆಡ್ಡಿ ಕಣದಲ್ಲಿದ್ದಾರೆ.

Kannada film Producer k manju likely to contest from bommanahalli

ಇನ್ನು ನಿರ್ಮಾಪಕ ಕೆ.ಮಂಜು ಕನ್ನಡದಲ್ಲಿ ಅನೇಕ ಸಿನಿಮಾಗಳಿಗೆ ಬಂಡವಾಳ ಹಾಕಿದ್ದಾರೆ. 'ಅರಮನೆ', 'ಸಾಹುಕಾರ', 'ಸೂಪರ್ ರಂಗ', 'ರಾಜಾಹುಲಿ', 'ಸಂತು ಸ್ಟ್ರೈಟ್ ಫಾರ್ವಾರ್ಡ್' ಕೆ.ಮಂಜು ನಿರ್ಮಾಣದ ಪ್ರಮುಖ ಸಿನಿಮಾಗಳಾವಿವೆ.

More from Filmibeat

English summary
Elections 2018 : Kannada film Producer K Manju likely to contest from Bommanahalli reportedly he is filing his nomination today after getting blessings from JDS supremo HD Deve Gowda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X