Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸತ್ಯಾನಂದ ಚಿತ್ರಕ್ಕೆ ಸೆನ್ಸಾರ್ ವಯಸ್ಕರ ಪ್ರಮಾಣ ಪತ್ರ
ಈ ಚಿತ್ರ ಹಲವು ವಿವಾದಗಳಿಗೆ ಗುರಿಯಾಗಿ ಹೈಕೋರ್ಟ್ ಕಟಕಟೆಗೆ ಬಂದು ನಿಂತಿತ್ತು. ವಿವಾದ ನ್ಯಾಯಾಲಯದಲ್ಲಿರುವ ಕಾರಣ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲು ನಿರಾಕರಿಸಿತ್ತು. ಕಡೆಗೆ ಹೈಕೋರ್ಟ್ ಚಿತ್ರವನ್ನು ವೀಕ್ಷಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುವಂತೆ ಸೆನ್ಸಾರ್ ಮಂಡಳಿಗೆ ಆದೇಶಿಸಿತ್ತು.
ಈ ಆದೇಶದ ಹಿನ್ನೆಲೆಯಲ್ಲಿ ರಿವೈಸಿಂಗ್ ಸಮಿತಿ ಚಿತ್ರವನ್ನು ವೀಕ್ಷಿಸಿದೆ. ರಂಗಭೂಮಿ ಕಲಾವಿದೆ ಹಾಗೂ ನಟಿ ಅರುಂಧತಿ ನಾಗ್ ಅವರ ನೇತೃತ್ವದ 10 ಜನರ ತಂಡ ಚಿತ್ರವನ್ನು ವೀಕ್ಷಿಸಿ, ಚರ್ಚಿಸಿ ಹಲವು ಕಡೆ ಕತ್ತರಿ ಪ್ರಯೋಗ ಮಾಡಿ ಎ ಪ್ರಮಾಣ ಪತ್ರ ನೀಡಿದೆ.
ಸದ್ಯಕ್ಕೆ 'ಸತ್ಯಾನಂದ' ಚಿತ್ರ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ಇದ್ದು ಅದು ತೆರೆವುಗೊಂಡ ಬಳಿಕ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರದ ನಿರ್ಮಾಪಕ ಮದನ್ ಪಟೇಲ್ ಹೇಳಿದ್ದಾರೆ. ಇದು ನನ್ನ ಹೋರಾಟಕ್ಕೆ ಸಂದ ಜಯ ಎಂದೂ ಸಂತಸ ವ್ಯಕ್ತಪಡಿಸಿದ್ದಾರೆ.
ತಮ್ಮ ಚಿತ್ರ ಸ್ವಾಮಿ ನಿತ್ಯಾನಂದ ಜೀವನ ಚರಿತ್ರೆ ಕುರಿತಾದದ್ದಲ್ಲ. ಡೋಂಗಿ ಹಾಗೂ ಕಪಟ ಸ್ವಾಮಿಗಳ ಮೇಲೆ ಬೆಳಕು ಚೆಲ್ಲುತ್ತದೆ. ಸ್ವಾಮಿ ನಿತ್ಯಾನಂದನ ಬಗ್ಗೆ ನಮ್ಮ ಬಳಿ ಹೆಚ್ಚಿನ ಮಾಹಿತಿಯೂ ಇಲ್ಲ ಎಂದಿದ್ದಾರೆ ಮದನ್ ಪಟೇಲ್. (ಏಜೆನ್ಸೀಸ್)