Don't Miss!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಾಣ ಬಿಟ್ಟೇವು ಕಾವೇರಿ ನೀರು ಬಿಡಲ್ಲ, ತಾರೆಗಳು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಚೇಂಬರ್ ನೂತನ ಅಧ್ಯಕ್ಷ ಬಿ ವಿಜಯಕುಮಾರ್ ಹಾಗೂ ಕಲಾವಿದರ ಸಂಘದ ಅಧ್ಯಕ್ಷ ರೆಬೆಲ್ ಸ್ಟಾರ್ ಅಂಬರೀಶ್ ನೇತೃತ್ವದಲ್ಲಿ ಕನ್ನಡ ಚಿತ್ರೋದ್ಯಮ ಪ್ರತಿಭಟನೆ ನಡೆಸಿತು.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮಾತನಾಡುತ್ತಾ, ಕರ್ನಾಟಕದಲ್ಲಿ ತಮಿಳಲು ವಾಸಿಸುತ್ತಿದ್ದಾರೆ. ಈ ಪ್ರತಿಭಟನೆಗೆ ಕನ್ನಡಿಗರ ಜೊತೆ ತಮಿಳರೂ ಕೈಜೋಡಿಸಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸೋಣ. ಇದಕ್ಕೆ ನಮ್ಮ ಕುಟುಂಬದ ಸಂಪೂರ್ಣ ಬೆಂಬಲವಿದೆ ಎಂದರು.
ಇಲ್ಲಿನ ಜನಪ್ರತಿನಿಧಿಗಳಿಗೆ ಕನ್ನಡಿಗರ ಬಗ್ಗೆ ಹಾಗೂ ಕಾವೇರಿ ಬಗ್ಗೆ ಕಳಕಳಿ ಇದ್ದಿದ್ದರೆ ಇಂದು ನಾವು ಯಾರೂ ಬೀದಿಗೆ ಬಂದು ಪ್ರತಿಭಟಿಸಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು ಶಿವಣ್ಣ. ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಸಹ ಶಾಂತಿಯುವ ಪ್ರತಿಭಟನೆಗೆ ಕರೆಕೊಟ್ಟರು.
ಚಿತ್ರನಟ ಹಾಗೂ ನಿರ್ದೇಶಕ ಪ್ರೇಮ್ ಮಾತನಾಡುತ್ತಾ, ಪ್ರತಿವರ್ಷ ಕಾವೇರಿ ನೀರಿಗಾಗಿ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ವಿವಾದಗಳು ನಡೆಯುತ್ತಲೇ ಇವೆ. ಪ್ರಧಾನ ಮಂತ್ರಿಗಳು ಅಂಕಿಅಂಶಗಳನ್ನು ಪರಿಶೀಲಿಸಿ ಇದಕ್ಕೊಂದು ಶಾಶ್ವತ ಪರಿಹಾರ ನೀಡಬೇಕು ಎಂದರು.
ನವರಸನಾಯಕ ಜಗ್ಗೇಶ್ : ನಮ್ಮ ರಾಜ್ಯದ ನಾಲ್ಕು ಮಂದಿ ಸಂಸದರಿಗೆ ಮೀಟ್ರಿದ್ರೆ ತಕ್ಷಣ ರಾಜೀನಾಮೆ ನೀಡಲಿ. ಇದೆಲ್ಲಾ ಜಯಲಲಿತಾ ಹಾಗೂ ಕೇಂದ್ರ ಸರ್ಕಾರ ಆಡುತ್ತಿರುವ ನಾಟಕ. ಕನ್ನಡಿಗರು ಶಾಂತಿಪ್ರಿಯರು, ರೊಚ್ಚಿಗೆದ್ದರೆ ಹನಿ ಕಾವೇರಿ ನೀರು ಸಿಗಲ್ಲ ಎಂದು ಎಚ್ಚರಿಸಿದರು.
ರಿಯಲ್ ಸ್ಟಾರ್ ಉಪೇಂದ್ರ : ನಾವೆಲ್ಲಾ ಹೋರಾಟ ಮಾಡಬೇಕಾಗಿರುವುದು ಇಲ್ಲಲ್ಲ. ನಾವು ಆಯ್ಕೆ ಮಾಡಿ ಕಳುಹಿಸಿರುವ ಜನಪ್ರತಿನಿಧಿಗಳ ಮನೆ ಮುಂದೆ. ಆಗ ಅವರಿಗೆ ಬಿಸಿ ಮುಟ್ಟುತ್ತೆ ಎಂದರು.
ಪ್ರತಿಭಟನೆಯಲ್ಲಿ ದುನಿಯಾ ವಿಜಯ್, ಯೋಗೇಶ್, ಜಯಂತಿ, ಯಶ್, ತಾರಾ, ರಮೇಶ್ ಭಟ್, ಶ್ರೀನಿವಾಸ ಮೂರ್ತಿ, ಮಾಳವಿಕಾ, ಗಣೇಶ್, ಅನಿರುದ್ಧ, ಭಾರತಿ ವಿಷ್ಣುವರ್ಧನ್, ಶ್ರುತಿ, ಥ್ರಿಲ್ಲರ್ ಮಂಜು, ಪೂಜಾಗಾಂಧಿ ಸೇರಿದಂತೆ ಹಲವಾರು ತಾರೆಗಳು ಪಾಲ್ಗೊಂಡಿದ್ದರು.
ಕಿಚ್ಚ ಸುದೀಪ್ ಅವರು ಕಾರಣಾಂತರಗಳಿಂದ ಪ್ರತಿಭಟನೆಗೆ ತಡವಾಗಿ ಆಗಮಿಸಿದರು. ಅವರು ನೇರವಾಗಿ ರಾಜಭವನಕ್ಕೆ ಬಂದರು. ಇದೇ ಸಂದರ್ಭದಲ್ಲಿ ಸಿನೆಮಾ ತಾರೆಗಳು ಮೌನ ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಿ ಮನವಿ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದರು. (ಒನ್ಇಂಡಿಯಾ ಕನ್ನಡ)