Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕೃತಕಾಮಿ 'ಉಮೇಶ್ ರೆಡ್ಡಿ' ಚಿತ್ರದ ಫಸ್ಟ್ ಲುಕ್
ಕನ್ನಡ ಚಿತ್ರೋದ್ಯಮ ನೈಜ ಘಟನೆ ಆಧಾರಿತ ಚಿತ್ರಗಳ ಕಡೆಗೆ ಹೆಚ್ಚು ಒಲವು ತೋರಿಸುತ್ತಿರುವಂತಿದೆ. ನೈಜ ಘಟನೆಗಳನ್ನು ಆಧರಿಸಿ ಹೊಸ ಹೊಸ ಕಥೆಗಳನ್ನು ಹೆಣೆದು ರೀಲು ಸುತ್ತಲಾಗುತ್ತಿದೆ. ಕೆಲವು ಚಿತ್ರಗಳು ಸದ್ದು ಮಾಡುತ್ತಿವೆ. ಈಗ ಅಂತಹದ್ದೇ ಒಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಸಾಯಿಕೃಷ್ಣ.
ಅವರು ಕೈಗೆತ್ತಿಕೊಂಡಿರುವ ಚಿತ್ರದ ಹೆಸರು 'ಉಮೇಶ್ ರೆಡ್ಡಿ'. ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ವಿಕೃತಕಾಮಿಯೊಬ್ಬನ ಕಥೆಯನ್ನು ಅವರು ಬೆಳ್ಳಿತೆರೆಗೆ ತರುತ್ತಿದ್ದಾರೆ. ಇದಕ್ಕಾಗಿ ಅವರು ಅವರು ಹಲವಾರು ತಿಂಗಳುಗಳ ಕಾಲ ಶ್ರಮಿಸಿ ಕಥೆಯನ್ನು ಹೆಣೆದಿದ್ದಾರೆ.
ಅಂದಹಾಗೆ ಉಮೇಶ್ ರೆಡ್ಡಿ ಹುಟ್ಟಿ ಬೆಳೆದದ್ದೆಲ್ಲಾ ಚಿತ್ರದುರ್ಗದಲ್ಲಿ. ಹಾಗಾಗಿ ನಿರ್ದೇಶಕರು ಅಲ್ಲೇ ಮುಹೂರ್ತ ನೆರವೇರಿಸಿದ್ದರು. ಹಾಗೆಯೇ ಆತ ಎಲ್ಲೆಲ್ಲಿ ಅಪರಾಧಗಳನ್ನು ಎಸೆದಿದ್ದಾನೋ ಅಲ್ಲಲ್ಲೇ ಚಿತ್ರೀಕರಿಸುವುದಾಗಿಯೂ ತಿಳಿಸಿದ್ದಾರೆ.
ಉಮೇಶ್ ರೆಡ್ಡಿಯ ಅಪರಾಧಗಳ ಜಾಡನ್ನು ಹುಡುಕುತ್ತಾ ಹೊರಟರೆ ಕಾಶ್ಮೀರ, ಪುಣೆಯಲ್ಲೂ ಚಿತ್ರೀಕರಣ ಮಾಡಬೇಕಾಗುತ್ತದೆ. ತಾವು ಅದಕ್ಕೂ ಸಿದ್ಧ ಎನ್ನುತ್ತಾರೆ ಚಿತ್ರದ ನಿರ್ಮಾಪಕ ರಮೇಶ್. ಚಿತ್ರದ ಪ್ರಮುಖ ಪಾತ್ರದಲ್ಲಿ ರೂಪಿಕಾ ಅಭಿನಯಿಸುತ್ತಿದ್ದಾರೆ. (ಏಜೆನ್ಸೀಸ್)