Just In
- 20 min ago
ಬೆಂಕಿ ಹಚ್ಚಿ ಆನೆ ಸಾವು: ಈ ಪೈಶಾಚಿಕ ಕೃತ್ಯ ನಡೆಸಿದ ಪಾಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು- ಸುಮಲತಾ
- 2 hrs ago
ನಟಿ ರಾಗಿಣಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರಲು ಪರದಾಟ
- 2 hrs ago
ಕಾರವಾರ ಬೀಚ್ ಸ್ವಚ್ಛ ಮಾಡಿದ ನಟ ಅರುಣ್ ಸಾಗರ್
- 2 hrs ago
ಹಿಂದಿ ರಾಷ್ಟ್ರ ಭಾಷೆ ಎಂದ ಸಾಹಿತಿ ದೊಡ್ಡರಂಗೇಗೌಡ: ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದ ನಿಖಿಲ್
Don't Miss!
- News
"ಸಿಬಿಐ, ಇಡಿ ಮೂಲಕ ಮೋದಿ ತಮಿಳುನಾಡನ್ನು ನಿಯಂತ್ರಿಸುವ ಪ್ರಯತ್ನದಲ್ಲಿದ್ದಾರೆ"
- Sports
'ವೈಟ್ಬಾಲ್ ತಂಡಗಳಲ್ಲಿ ಅಯ್ಯರ್, ಸ್ಯಾಮ್ಸನ್ ಬದಲು ಪಂತ್ ಆಡಿಸಬೇಕು'
- Automobiles
2021ರ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಿರಿಯ ನಿರ್ಮಾಪಕ ಎ ಆರ್ ರಾಜುಗೆ ಹೃದಯಾಘಾತ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಎ ಆರ್ ರಾಜು ಎಂದೇ ಖ್ಯಾತರಾಗಿರುವ ಅಲ್ಲೂರಿ ರೆಡ್ಡಪ್ಪ ರಾಜು ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಐದು ದಶಕಗಳ ಕಾಲ ಚಿತ್ರ ವಿತರಕರಾಗಿ, ನಿರ್ಮಾಪರಾಗಿ ರಾಜು ಅವರು ಚಿತ್ರರಂಗದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ರಾಜು ಅವರು ಇದುವರೆಗೂ 35ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ.
'ಅಜಂತ ಮೂವೀಸ್' ಲಾಂಛನದಲ್ಲಿ ರಾಜು ಅವರು ಸಾಹಸಸಿಂಹ ವಿಷ್ಣುವರ್ಧನ್ ಅವರೊಂದಿಗೆ 27 ಚಿತ್ರಗಳನ್ನು ನಿರ್ಮಿಸಿದ್ದಾರೆ. ವಿಷ್ಣುವರ್ಧನ್ ಅವರ ಮೊಟ್ಟ ಮೊದಲ ಡಬಲ್ ರೋಲ್ ಸಿನಿಮಾ 'ವಿಜಯ್ ವಿಕ್ರಮ್' ನಿರ್ಮಾಪಕರು ರಾಜು ಎಂಬುದು ವಿಶೇಷ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮೊದಲ ಕಲರ್ ಚಿತ್ರ 'ಸಹೋದರ ಸವಾಲ್' ನಿರ್ಮಿಸಿದ್ದೂ ಇದೇ ರಾಜು ಅವರು. ಆ ಚಿತ್ರದಲ್ಲಿ ರಜನಿಕಾಂತ್ ಅವರಿಗೆ ವಿಷ್ಣು ತಮ್ಮನಾಗಿ ಅಭಿನಯಿಸಿರುವುದು ಎಲ್ಲರಿಗೂ ಗೊತ್ತೇ ಇದೆ.
ಸದಾ ಕನ್ನಡ ಚಿತ್ರರಂಗ ಒಗ್ಗಟಾಗಿರಬೇಕೆಂದು ಬಯಸುತ್ತಿದ್ದ ರಾಜು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಫಿಲ್ಮಿಬೀಟ್ ಆಶಿಸುತ್ತದೆ. ವಿಜಯ್ ವಿಕ್ರಮ್, ಬೆಳ್ಳಿನಾಗ, ಭದ್ರಕಾಳಿ, ಸತಿ ಸಕ್ಕುಬಾಯಿ, ಸ್ನೇಹಿತರ ಸವಾಲ್, ಸಹೋದರರ ಸವಾಲ್, ಸಾಹಸ ಸಿಂಹ ಹೀಗೆ ಅವರು ನಿರ್ಮಿಸಿದ ಚಿತ್ರಗಳ ಪಟ್ಟಿ ಸಾಕಷ್ಟಿದೆ. (ಫಿಲ್ಮಿಬೀಟ್ ಕನ್ನಡ)