Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ಮಾಪಕ ಎ ಆರ್ ರಾಜುಗೆ ಹೃದಯಾಘಾತ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಎ ಆರ್ ರಾಜು ಎಂದೇ ಖ್ಯಾತರಾಗಿರುವ ಅಲ್ಲೂರಿ ರೆಡ್ಡಪ್ಪ ರಾಜು ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಐದು ದಶಕಗಳ ಕಾಲ ಚಿತ್ರ ವಿತರಕರಾಗಿ, ನಿರ್ಮಾಪರಾಗಿ ರಾಜು ಅವರು ಚಿತ್ರರಂಗದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ರಾಜು ಅವರು ಇದುವರೆಗೂ 35ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮೊದಲ ಕಲರ್ ಚಿತ್ರ 'ಸಹೋದರ ಸವಾಲ್' ನಿರ್ಮಿಸಿದ್ದೂ ಇದೇ ರಾಜು ಅವರು. ಆ ಚಿತ್ರದಲ್ಲಿ ರಜನಿಕಾಂತ್ ಅವರಿಗೆ ವಿಷ್ಣು ತಮ್ಮನಾಗಿ ಅಭಿನಯಿಸಿರುವುದು ಎಲ್ಲರಿಗೂ ಗೊತ್ತೇ ಇದೆ.
ಸದಾ ಕನ್ನಡ ಚಿತ್ರರಂಗ ಒಗ್ಗಟಾಗಿರಬೇಕೆಂದು ಬಯಸುತ್ತಿದ್ದ ರಾಜು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಫಿಲ್ಮಿಬೀಟ್ ಆಶಿಸುತ್ತದೆ. ವಿಜಯ್ ವಿಕ್ರಮ್, ಬೆಳ್ಳಿನಾಗ, ಭದ್ರಕಾಳಿ, ಸತಿ ಸಕ್ಕುಬಾಯಿ, ಸ್ನೇಹಿತರ ಸವಾಲ್, ಸಹೋದರರ ಸವಾಲ್, ಸಾಹಸ ಸಿಂಹ ಹೀಗೆ ಅವರು ನಿರ್ಮಿಸಿದ ಚಿತ್ರಗಳ ಪಟ್ಟಿ ಸಾಕಷ್ಟಿದೆ. (ಫಿಲ್ಮಿಬೀಟ್ ಕನ್ನಡ)