Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದುವರೆದ 'ಕಟ್ಟಪ್ಪ'ನ ವಿವಾದ: ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳು ಬ್ಯಾನ್!
ತಮಿಳು ನಟ ಸತ್ಯರಾಜ್ ಕನ್ನಡಿಗರಿಗೆ ವಿಷಾದ ವ್ಯಕ್ತಪಡಿಸಿದ ನಂತರ ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ನಿನ್ನೆ (ಏಪ್ರಿಲ್ 21) ಮಧ್ಯಾಹ್ನದ ಹೊತ್ತಿಗೆ ತಮಿಳು ನಟ ಸತ್ಯರಾಜ್ ವಿಡಿಯೋ ಮೂಲಕ ಕನ್ನಡಿಗರಿಗೆ ಆದ ನೋವಿಗೆ ವಿಷಾದ ವ್ಯಕ್ತಪಡಿಸಿದ್ದರು. 9 ವರ್ಷಗಳ ಹಿಂದೆ ತಾನು ಮಾಡಿದ್ದ ಆಕ್ರೋಶದ ಭಾಷಣದಲ್ಲಿ ಕರ್ನಾಟಕವನ್ನ ಮತ್ತು ಕನ್ನಡ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿದ್ದರು. ಅದನ್ನ ಪ್ರತಿಭಟಿಸಿ ಸತ್ಯರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ 'ಬಾಹುಬಲಿ-2 'ಚಿತ್ರವನ್ನ ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ವಿರೋಧಿಸಿದ್ದರು.[ಕನ್ನಡಿಗರನ್ನ ಉದ್ದೇಶಿಸಿ ಸತ್ಯರಾಜ್ ಮಾಡಿದ ತಮಿಳು ಭಾಷಣದಲ್ಲಿ ಏನಿದೆ.?]
ಈ ಹಿನ್ನಲೆಯಲ್ಲಿ ಸತ್ಯರಾಜ್ ಕನ್ನಡಿಗರಿಗೆ ವಿಷಾದ ವ್ಯಕ್ತಪಡಿಸಿ, 'ಬಾಹುಬಲಿ-2' ಚಿತ್ರವನ್ನ ಬಿಡುಗಡೆ ಮಾಡುವಂತೆ ಮನವಿಮಾಡಿಕೊಂಡಿದ್ದರು. ಸತ್ಯರಾಜ್ ಕನ್ನಡಿಗರಿಗೆ ವಿಷಾದ ವ್ಯಕ್ತಪಡಿಸಿರುವ ಹಿನ್ನಲೆ ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನವನ್ನ ರದ್ದು ಮಾಡಲಾಗಿದೆಯಂತೆ. 'ಶುದ್ದಿ', 'ಚಕ್ರವರ್ತಿ' ಹಾಗೂ 'ಶ್ರೀನಿವಾಸ ಕಲ್ಯಾಣ' ಸೇರಿದಂತೆ ಹಲವು ಚಿತ್ರಗಳ ಪ್ರದರ್ಶನವನ್ನ ನಿಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.[ಕನ್ನಡಿಗರ ಮುಂದೆ ಮಂಡಿಯೂರಿದ ಕಟ್ಟಪ್ಪ: ಸಾ.ರಾ.ಗೋವಿಂದು ಪ್ರತಿಕ್ರಿಯೆ ಏನು.?]
ಇದು ಕನ್ನಡಿಗರನ್ನ ಮತ್ತಷ್ಟು ಕೆರಳಿಸಿದ್ದು, ಕರ್ನಾಟಕದಲ್ಲೂ ತಮಿಳು ಚಿತ್ರಗಳನ್ನ ಬ್ಯಾನ್ ಮಾಡುವುದಾಗಿ ಕನ್ನಡ ಪರ ಹೋರಾಟಗಾರರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.