Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಚಿತ್ರದ ಮುಂಗಡ ಬುಕ್ಕಿಂಗ್ ಪ್ರಾರಂಭ
ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ 'ಕುರುಕ್ಷೇತ್ರ' ಚಿತ್ರ ಇದೇ ತಿಂಗಳು 9ಕ್ಕೆ ತೆರೆಗೆ ಬರುತ್ತಿದೆ. ಬಹುಕೋಟಿ ವೆಚ್ಚದಲ್ಲಿ ತಾಯಾರಾಗಿರುವ ಪೌರಾಣಿಕ ಸಿನಿಮಾ 'ಕುರುಕ್ಷೇತ್ರ' ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಸುಮಾರು ಎರಡಕ್ಕೂ ಹೆಚ್ಚು ಸಮಯದಿಂದ ಕಾಯುತ್ತಿರುವ ಅಭಿಮಾನಿಗಳಿಗೀಗ ಆ ಕ್ಷಣ ಹತ್ತಿರವಾಗುತ್ತಿದೆ.
ಈಗಾಗಲೆ 'ಕುರುಕ್ಷೇತ್ರ' ಚಿತ್ರದ ಬುಕ್ಕಿಂಗ್ ಪ್ರಾರಂಭವಾಗಿದೆ. ಬುಕ್ ಮೈ ಶೋನಲ್ಲಿ ಈಗಾಗಲೆ ಟಿಕೆಟ್ ಲಭ್ಯವಿದೆ. ಬೆಂಗಳೂರಿನಲ್ಲಿ ಊರ್ವಶಿ, ಕಾವೇರಿ, ಲಕ್ಷ್ಮಿ, ಸ್ವಾಗತ್ ಶಂಕರ್ ನಾಗ್ ಸೇರಿದಂತೆ ಸಾಕಷ್ಟು ಚಿತ್ರಮಂದಿರಗಳಲ್ಲಿ ಬುಕ್ಕಿಂಗ್ ಓಪನ್ ಆಗಿದೆ.
ಸುದೀಪ್ ಬಗ್ಗೆ ಕೇಳಿದ್ದಕ್ಕೆ ಫುಲ್ ಗರಂ ಆದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಳಗ್ಗೆ 9.30ಕ್ಕೆ ತಾವರೆಕೆರೆಯಲ್ಲಿ 'ಕುರುಕ್ಷೇತ್ರ' ಮೊದಲ ಶೋ ಪ್ರಾರಂಭವಾಗುವ ಸಾಧ್ಯತೆ ಇದೆ. ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಕುರುಕ್ಷೇತ್ರ ಚಿತ್ರದಲ್ಲಿ ದೊಡ್ಡ ಕಲಾವಿದರು ಬಣ್ಣ ಹಚ್ಚಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ಎನ್ನುವ ವಿಶೇಷ ಕೂಡ ಈ ಚಿತ್ರಕ್ಕಿದೆ.
ಚಿತ್ರದಲ್ಲಿ ಅಂಬರೀಶ್, ಅರ್ಜುನ್ ಸರ್ಜಾ, ಶಶಿಕುಮಾರ್, ರವಿಶಂಕರ್, ಸೋನು ಸೂದ್, ಮೇಘನಾ ರಾಜ್, ಸ್ನೇಹಾ, ಹರಿಪ್ರಿಯಾ ಸೇರಿದಂತೆ ದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ. ಇನ್ನು ನಾಗಣ್ಣ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರಕ್ಕೆ ನಿರ್ಮಾಪಕ ಮುನಿರತ್ನ ಬಂಡವಾಳ ಹೂಡಿದ್ದಾರೆ.