Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 'ಆಕೆ'ಗೂ ತಮಿಳಿನ 'ಮಾಯ'ಗೂ ಸಂಬಂಧ! ಸಾಕ್ಷಿ ಇಲ್ಲಿದೆ
ಕೆ.ಎಂ ಚೈತನ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ 'ಆಕೆ'. ಸಸ್ಪೆನ್ಸ್ ಥ್ರಿಲ್ಲರ್ ಕಥೆಯೊಂದಿರುವ 'ಆಕೆ' ಮೇಕಿಂಗ್ ವಿಚಾರಕ್ಕೆ ಸ್ಯಾಂಡಲ್ ವುಡ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ.
ಚಿರಂಜೀವಿ ಸರ್ಜಾ ಮತ್ತು ಶರ್ಮಿಳಾ ಮಾಂಡ್ರೆ ಅಭಿನಯದ 'ಆಕೆ'ಗೆ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡಿರುವುದು ವಿಶೇಷ. ಹೀಗಾಗಿ, 'ಆಕೆ' ಹಾಲಿವುಡ್ ಮಟ್ಟದಲ್ಲಿ ತಯಾರಾಗಿದೆ ಎಂಬುದು ವಿಶೇಷ.[ಕನ್ನಡ ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ಖ್ಯಾತ ಸಂಸ್ಥೆ!]
'ಆಕೆ' ಚಿತ್ರಕ್ಕೆ ಭಾರತೀಯ ತಂತ್ರಜ್ಞರಿಗಿಂತ ಹಾಲಿವುಡ್ ತಂತ್ರಜ್ಞರು ಹೆಚ್ಚು ಕೆಲಸ ಮಾಡಿದ್ದಾರೆ. ಕಾರ್ಲ್ ಆಸ್ಟಿನ್ ಎಂಬುವವರು ಚೈತನ್ಯ ಜೊತೆಗೆ ಚಿತ್ರಕಥೆ ಬರೆದಿದ್ದಾರಂತೆ. ಪಾಲ್ ಬನ್ರ್ಸ್ ಎನ್ನುವವರು ಪ್ರೊಡಕ್ಷನ್ ಡಿಸೈನರ್ ಆಗಿದ್ದಾರಂತೆ. ಹ್ಯಾರಿ ಪಾಟರ್' ಚಿತ್ರಕ್ಕೆ ಕ್ಯಾಮರಾಮ್ಯಾನ್ ಆಗಿದ್ದ ಇಯಾನ್ ಹೌಸ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.
ಇಂತಹ 'ಆಕೆ' ಚಿತ್ರದ ಬಗ್ಗೆ ಈಗ ಒಂದು ಅನುಮಾನ ಶುರುವಾಗಿದೆ. ಕನ್ನಡದ 'ಆಕೆ' ರೀಮೇಕ್ ಎಂಬ ಮಾತು ಕೇಳಿಬರುತ್ತಿದೆ. ತಮಿಳಿನ 'ಮಾಯ' ಚಿತ್ರದ ಕನ್ನಡ ಅವತರಣಿಕೆ ಈ 'ಆಕೆ' ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ಕೊಡುವಂತೆ 'ಆಕೆ' ಟ್ರೈಲರ್ ಕೂಡ ಬಿಡುಗಡೆಯಾಗಿದೆ.
'ಆಕೆ' ಟ್ರೈಲರ್ ಇಲ್ಲಿದೆ ನೋಡಿ....
2015 ರಲ್ಲಿ ತೆರೆಕಂಡಿದ್ದ ತಮಿಳಿನ 'ಮಾಯ' ಮಹಿಳಾ ಪ್ರಧಾನ ಚಿತ್ರವಾಗಿದ್ದು, ನಯನತಾರ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ಒಂದು ಮಗುವಿನ ತಾಯಿ ಪಾತ್ರದಲ್ಲಿ ಬಣ್ಣ ಹಚ್ಚಿದ್ದ ನಯನತಾರ, ತಮ್ಮ ಅಭಿನಯದ ಮೂಲಕ ಸಿನಿಮಾವನ್ನ ಗೆಲ್ಲಿಸಿದ್ದರು. ಇದೀಗ, ಇದೇ ಕಥೆಯೇ ಕನ್ನಡದ 'ಆಕೆ' ಎನ್ನುವುದು ಟ್ರೈಲರ್ ನಲ್ಲಿ ಸಾಬೀತಾಗಿದೆ.
'ಮಾಯಾ' ಟ್ರೈಲರ್ ಇಲ್ಲಿದೆ ನೋಡಿ.....
ಹೀಗಾಗಿ, ಕನ್ನಡದ 'ಆಕೆ', ತಮಿಳಿನ 'ಮಾಯ' ಎನ್ನುವುದು ಬಹುತೇಕ ಖಚಿತವಾಗಿದೆ. ಇದನ್ನ ಚಿತ್ರತಂಡ ಕೂಡ ಹಲವು ಕಡೆ ಒಪ್ಪಿಕೊಂಡಿದ್ದು, ಕನ್ನಡ ನೇಟಿವಿಟಿಗೆ ತಕ್ಕಂತೆ ಸಂಪೂರ್ಣವಾಗಿ ಬದಲಾವಣೆ ಮಾಡಿಕೊಂಡಿದ್ದಾರಂತೆ. ಅಂದ್ಹಾಗೆ, ಕಲೈ ಸೂರಿ, ಯೋಗೇಶ್ ದ್ವಾರಕೀಶ್ ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಅವರ ಸಂಗೀತವಿದೆ. ಸದ್ಯ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಬ್ಯುಸಿಯಿರುವ ಚಿತ್ರತಂಡ, ಮಾರ್ಚ್ ತಿಂಗಳಲ್ಲಿ ತೆರೆಗೆ ಬರುವ ತಯಾರಿಯಲ್ಲಿದೆ.