Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಳ್ಳಿ ಸೊಗಡಿನ 'ಆನೆಬಲ' ನಾಳೆ ರಾಜ್ಯಾದ್ಯಂತ ಬಿಡುಗಡೆ
ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ 'ಆನೆಬಲ' ನಾಳೆ (ಫೆಬ್ರವರಿ 28) ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಟ್ರೈಲರ್ ಹಾಗೂ ಹಾಡುಗಳಿಂದ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಿಕ್ಕಾಪಟ್ಟೆ ಸದ್ದು ಮಾಡಿರುವ 'ಆನೆಬಲ' ಸಿನಿಮಾ ನಾಳೆ ನಿಮ್ಮೆಲ್ಲರ ಮುಂದೆ ಬರಲಿದೆ.
ಪ್ರಾಕೃತಿಕ ಸೊಬಗು ಮತ್ತು ಗ್ರಾಮ ಸಂಸ್ಕೃತಿಯನ್ನು ಸಾರುವ ಸಿನಿಮಾ 'ಆನೆಬಲ'. ಮಂಡ್ಯ ಭಾಗದ ಹಳ್ಳಿ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ 'ಆನೆಬಲ' ಚಿತ್ರದಲ್ಲಿ ರಾಗಿ ಮತ್ತು ರಾಗಿ ಮುದ್ದೆಯ ಮಹತ್ವಕ್ಕೆ ಹೆಚ್ಚು ಒತ್ತು ನೀಡಲಾಗಿದೆ.
ಹೊಸ ನಿರೀಕ್ಷೆ ಹುಟ್ಟು ಹಾಕಿದ ಹೊಸಬರ "ಆನೆಬಲ" ಚಿತ್ರ
'ಆನೆಬಲ' ಚಿತ್ರದ ಕೆಲ ದೃಶ್ಯಗಳನ್ನ ರಿಯಲ್ ಆಗಿ ಜಾತ್ರೆಯಲ್ಲಿ ಚಿತ್ರೀಕರಿಸಲಾಗಿದೆ. ಜೊತೆಗೆ ರಾಗಿ ಮುದ್ದೆ ನುಂಗುವ ಸ್ಪರ್ಧೆಯನ್ನೂ ರಿಯಲ್ ಆಗಿ ಆಯೋಜಿಸಿ ಶೂಟಿಂಗ್ ಮಾಡಲಾಗಿದೆ. ಹೀಗೆ ಹೆಚ್ಚು ನೈಜತೆಯಿಂದ ಚಿತ್ರೀಕರಣಗೊಂಡಿರುವ 'ಆನೆಬಲ' ಚಿತ್ರಕ್ಕೆ ಸೂನಗಹಳ್ಳಿ ರಾಜು ಆಕ್ಷನ್ ಕಟ್ ಹೇಳಿದ್ದಾರೆ.
ಹೊಸಬರ ವಿನೂತನ ಪ್ರಯೋಗದ 'ಆನೆಬಲ' ಚಿತ್ರದ ಟ್ರೈಲರ್ ಬಿಡುಗಡೆ
ಯೋಗರಾಜ್ ಭಟ್ ಮತ್ತು ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡುಗಳಿಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಜನತಾ ಟಾಕೀಸ್ ಸಂಸ್ಥೆ ಮೂಲಕ ಎ.ವಿ.ವೇಣುಗೋಪಾಲ್ ಅಡಕಿಮಾರನಹಳ್ಳಿ ಅವರು ನಿರ್ಮಿಸಿರುವ ಚಿತ್ರದಲ್ಲಿ ಸಾಗರ್, ರಕ್ಷಿತ, ಮಲ್ಲರಾಜು, ಉದಯ್ ಶ್ವೇತಾ, ಹರೀಶ್ ಶೆಟ್ಟಿ, ಚಿರಂಜೀವಿ, ಮುತ್ತುರಾಜು, ಗೌತಮ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.